ಅರಣ್ಯ ಭೂಮಿ ಒತ್ತುವರಿ ಆರೋಪ: ಡಿ.ಕೆ ಸುರೇಶ್ಗೆ ರಿಲೀಫ್
ಸಾತನೂರು ಮತ್ತು ಕನಕಪುರ ಅರಣ್ಯ ಪ್ರದೇಶದಲ್ಲಿ ಅರಣ್ಯ ಭೂಮಿ ಒತ್ತುವರಿ ಮತ್ತು ಒತ್ತುವರಿ ಜಾಗದಲ್ಲಿ ಗಣಿಗಾರಿಕೆ ಆರೋಪ ಸಂಬಂಧ ದಾಖಲಾಗಿದ್ದ ಎರಡು ...
Vijaya Karnataka 27 Jun 2019, 5:00 am
ಬೆಂಗಳೂರು: ಸಾತನೂರು ಮತ್ತು ಕನಕಪುರ ಅರಣ್ಯ ಪ್ರದೇಶದಲ್ಲಿ ಅರಣ್ಯ ಭೂಮಿ ಒತ್ತುವರಿ ಮತ್ತು ಒತ್ತುವರಿ ಜಾಗದಲ್ಲಿ ಗಣಿಗಾರಿಕೆ ಆರೋಪ ಸಂಬಂಧ ದಾಖಲಾಗಿದ್ದ ಎರಡು ದೂರುಗಳಿಂದ ಸಂಸದ ಡಿ.ಕೆ. ಸುರೇಶ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರಿಲೀಫ್ ಸಿಕ್ಕಿದೆ.
ಕನಕಪುರ ಹಾಗೂ ಸಾತನೂರು ವಲಯ ಅರಣ್ಯಾಧಿಕಾರಿ ಅವರು ಸಂಸದ ಸುರೇಶ್ ವಿರುದ್ಧ ಕರ್ನಾಟಕ ಅರಣ್ಯ ಕಾಯಿದೆ ಹಾಗೂ ಗಣಿ ಮತ್ತು ಖನಿಜ ನಿಯಂತ್ರಣ, ಅಭಿವೃದ್ಧಿ ಕಾಯಿದೆ ಅಡಿ ಕೇಸ್ ದಾಖಲಿಸಿದ್ದರು.
ಕೆಲ ವರ್ಷಗಳ ಹಿಂದಿನ ಈ ಎರಡೂ ಪ್ರಕರಣಗಳಲ್ಲಿ ತನಿಖೆ ಮುಂದುವರಿಸಲು ಅನುಮತಿ ಕೋರಿ ಅರಣ್ಯಾಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತನಿಖೆ ವಿಳಂಬಕ್ಕೆ ಅರಣ್ಯಾಧಿಕಾರಿಗಳು ಸೂಕ್ತ ಸ್ಪಷ್ಟನೆ ನೀಡದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಲ್ಲಿಸಿದ್ದ ದೂರು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿ, ವಿಚಾರಣೆ ಪ್ರಕ್ರಿಯೆ ಮುಕ್ತಾಯಗೊಳಿಸಿದೆ.
ಕನಕಪುರ ಹಾಗೂ ಸಾತನೂರು ವಲಯ ಅರಣ್ಯಾಧಿಕಾರಿ ಅವರು ಸಂಸದ ಸುರೇಶ್ ವಿರುದ್ಧ ಕರ್ನಾಟಕ ಅರಣ್ಯ ಕಾಯಿದೆ ಹಾಗೂ ಗಣಿ ಮತ್ತು ಖನಿಜ ನಿಯಂತ್ರಣ, ಅಭಿವೃದ್ಧಿ ಕಾಯಿದೆ ಅಡಿ ಕೇಸ್ ದಾಖಲಿಸಿದ್ದರು.
ಕೆಲ ವರ್ಷಗಳ ಹಿಂದಿನ ಈ ಎರಡೂ ಪ್ರಕರಣಗಳಲ್ಲಿ ತನಿಖೆ ಮುಂದುವರಿಸಲು ಅನುಮತಿ ಕೋರಿ ಅರಣ್ಯಾಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತನಿಖೆ ವಿಳಂಬಕ್ಕೆ ಅರಣ್ಯಾಧಿಕಾರಿಗಳು ಸೂಕ್ತ ಸ್ಪಷ್ಟನೆ ನೀಡದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಲ್ಲಿಸಿದ್ದ ದೂರು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿ, ವಿಚಾರಣೆ ಪ್ರಕ್ರಿಯೆ ಮುಕ್ತಾಯಗೊಳಿಸಿದೆ.