ಆ್ಯಪ್ನಗರ

ಬಿಜೆಪಿಯ ನೂತನ ಪದಾಧಿಕಾರಿಗಳ ಔಪಚಾರಿಕ ಸಭೆ, ಹಲವರು ಗೈರು

ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ಮೊದಲ ಸಭೆ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ನೇತೃತ್ವದಲ್ಲಿ ಜರುಗಿತು. ಈ ಸಭೆಯಲ್ಲಿ ಹಲವು ಮಂದಿ ಗೈರು ಹಾಜರಾಗಿದ್ದರು.

Vijaya Karnataka Web 4 Aug 2020, 9:16 am
ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ಮೊದಲ ಸಭೆ ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಸೋಮವಾರ ನಡೆಯಿತು. ಔಪಚಾರಿಕವೆಂಬಂತೆ ನಡೆದ ಈ ಸಭೆಯಲ್ಲಿ ಹೊಸ ಪದಾಧಿಕಾರಿಗಳಿಗೆ ನೇಮಕ ಆದೇಶ ಪತ್ರವನ್ನು ಕಟೀಲ್‌ ನೀಡಿದರು.
Vijaya Karnataka Web Nalin Kumar Kateel


ಮೊದಲು ಉಪಾಧ್ಯಕ್ಷರೊಂದಿಗೆ ಪ್ರತ್ಯೇಕ ಸಭೆ ನಡೆಸಿದ ನಳೀನ್‌ಕುಮಾರ್‌ ಕಟೀಲ್‌ ನಂತರ ಎಲ್ಲ ಪದಾಧಿಕಾರಿಗಳೊಂದಿಗೂ ಸಮಾಲೋಚಿಸಿದರು. ಪದಾಧಿಕಾರಿಗಳ ಪೈಕಿ ಅರವಿಂದ ಲಿಂಬಾವಳಿ, ಶೋಭಾ ಕರಂದ್ಲಾಜೆ, ತೇಜಸ್ವಿನಿ ಅನಂತಕುಮಾರ್‌, ಎನ್‌. ರವಿಕುಮಾರ್‌, ಡಾ. ಸಂದೀಪ್‌, ಅಶೋಕ್‌ ಗಸ್ತಿ, ಬಂದಿರಲಿಲ್ಲ. ಸಿಎಂ ಯಡಿಯೂರಪ್ಪ ಪುತ್ರ ಹಾಗೂ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಇನ್ನು ಕೆಲವರು ಹೋಮ್‌ ಕ್ವಾರಂಟೈನ್‌ನಲ್ಲಿರುವುದರಿಂದ ಈ ಸಭೆಗೆ ಹಾಜರಾಗಿರಲಿಲ್ಲ. ಈ ಸಂಬಂಧ ಪೂರ್ವಾನುಮತಿ ಪಡೆದಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.



ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪದಾಧಿಕಾರಿಗಳಿಗೆ ಸೂಚನೆ ನೀಡಿದ ಕಟೀಲ್‌, ಶೀಘ್ರದಲ್ಲೆ ಮತ್ತೊಂದು ಸಭೆ ನಡೆಸಿ ಜವಾಬ್ದಾರಿ ಹಂಚಿಕೆ ಮಾಡುವುದಾಗಿ ತಿಳಿಸಿದ್ದಾರೆ. ಪರಸ್ಪರ ಪರಿಚಯದ ಜತೆಗೆ ವೈಯಕ್ತಿಕ ಹವ್ಯಾಸಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡಿರುವ ಅಧ್ಯಕ್ಷರು, ಕೊರೊನಾ ನಿಯಂತ್ರಣ ಕೆಲಸದಲ್ಲಿ ಎಲ್ಲರೂ ಸಕ್ರಿಯವಾಗಿ ಕೆಲಸ ಮಾಡುವ ಮೂಲಕ ಸಾಮಾಜಿಕ ಜವಾಬ್ದಾರಿ ತೋರಬೇಕೆಂದು ಸೂಚಿಸಿದರು. ರೈತ ಮೋರ್ಚಾ, ಮಹಿಳಾ ಮೋರ್ಚಾ, ಎಸ್‌ಸಿ ಮೋರ್ಚಾ, ಹಿಂದುಳಿದ ಮೋರ್ಚಾಗಳಿಗೆ ಶೀಘ್ರದಲ್ಲೇ ಪದಾಧಿಕಾರಿಗಳನ್ನು ನೇಮಿಸುವ ಬಗ್ಗೆ ಕೆಲಸ ಆರಂಭಿಸುವಂತೆಯೂ ಸೂಚಿಸಿದರೆಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ