ಆ್ಯಪ್ನಗರ

ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡದ ಬಿಜೆಪಿ ಸಚಿವರಿಂದ ನಿತ್ಯ ದಿಲ್ಲಿ ಟೂರ್: ಸಿದ್ದರಾಮಯ್ಯ

ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡದ ಬಿಜೆಪಿ ಸಚಿವರು, ನಿತ್ಯ ದಿಲ್ಲಿ ಪ್ರವಾಸ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

Vijaya Karnataka Web 26 Aug 2019, 12:19 pm
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಸರಕಾರದ ಎಲ್ಲ ಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವ ಮೂಲಕ ನೆರೆ ಸಂತ್ರಸ್ತರ ಸಮಸ್ಯೆಕ್ಕೆ ಸ್ಪಂದಿಸಬೇಕು. ಅದನ್ನು ಬಿಟ್ಟು ಬೆಂಗಳೂರು-ದೆಹಲಿ, ದೆಹಲಿ- ಬೆಂಗಳೂರು ಟೂರ್ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Vijaya Karnataka Web siddaramaiah3


ಈ ಕುರಿತು ಟ್ವೀಟ್ ಮಾಡಿ ಟೀಕಿಸಿರುವ ಅವರು, 'ಮುಖ್ಯಮಂತ್ರಿಗಳು ಒಳಗೊಂಡಂತೆ ಸರ್ಕಾರದ ಎಲ್ಲ ಮಂತ್ರಿಗಳು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗೆ ಸ್ಪಂದಿಸಬೇಕು. ಇದನ್ನು ಬಿಟ್ಟು ನಿತ್ಯ ಬೆಂಗಳೂರಿನಿಂದ ದೆಹಲಿ, ದೆಹಲಿಯಿಂದ ಬೆಂಗಳೂರಿಗೆ ಓಡಾಡುತ್ತಿದ್ದರೆ ಜನರ ಕಷ್ಟ ಕೇಳುವವರಾರು?, ಅನೈತಿಕ ಮಾರ್ಗದ ಮೂಲಕ‌ ಅಧಿಕಾರ ಹಿಡಿದವರ ಕತೆಯೇ ಹೀಗೆ, ಅವರಿಗೆ ಜನಪರ ಕಾಳಜಿಯಿರಲ್ಲ' ಎಂದಿದ್ದಾರೆ.



ನೆರೆ ಪೀಡಿತ ಬಾದಾಮಿ ಕ್ಷೇತ್ರಕ್ಕೆ ಆಗಮಿಸದ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಕಣ್ಣಿನ ಶಸ್ತ್ರಚಿಕಿತ್ಸೆಯಿಂದಾಗಿ ಪ್ರವಾಹ ಪೀಡಿತ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡುವುದರಿಂದ ತಪ್ಪಿಸಿಕೊಂಡು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ತೆರಳಿದ್ದು, ಈ ಹಿಂದೆ ವಿವಾದಕ್ಕೆ ಕಾರಣವಾಗಿತ್ತು.

ಮಧ್ಯಂತರ ಚುನಾವಣೆಯ ಸುಳಿವು

ರಾಜ್ಯದಲ್ಲಿ ಯಾವ ಸಮಯದಲ್ಲಾದರೂ ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸುಳಿವು ನಡಿದಿದ್ದಾರೆ.

'ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು, ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ. ಬಂಡಾಯ ಶಾಸಕರನ್ನು ಸೇರಿಸಿಕೊಂಡು ಸರ್ಕಾರ ನಡೆಸುವುದು ಸುಲಭದ ಮಾತಲ್ಲ, 'ಹಾಲು ಕುಡಿದ ಮಕ್ಕಳೇ ಬದುಕುವುದು ಕಷ್ಟವಿರುವಾಗ, ವಿಷ ಕುಡಿದ ಮಕ್ಕಳು ಬದುಕುತ್ತವಾ?' ಎಂದು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ