ಬೆಂಗಳೂರು: ಕಿಸಾನ್ ಸಮ್ಮಾನ್ಗಾಗಿ ಅನ್ನ ಭಾಗ್ಯದ ಅನುದಾನ ಕಡಿತಗೊಳಿಸುವ ವಿಚಾರವಾಗಿ ಅಸಮಾಧಾನ ವ್ಯಕ್ತ ಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದ ಬಡಜನತೆ ದಂಗೆ ಏಳಬಹುದು ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ನಾಲ್ಕು ಕೋಟಿ ಜನರಿಗೆ 7 ಕೆಜಿ ಅಕ್ಕಿಯನ್ನ ಉಚಿತವಾಗಿ ನೀಡುತ್ತಿತ್ತು. ಬಿಜೆಪಿ ಸರಕಾರ ರಚನೆಯಾದ ಮೇಲೆ ಅನ್ನಭಾಗ್ಯ ಅಕ್ಕಿ ಕಡಿಮೆ ಮಾಡಲು ಚರ್ಚೆ ಮಾಡಿದ್ದಾರೆ ಎಂಬ ಮಾಹಿತಿ ಬಂದಿದೆ. ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ. ಆದರೆ ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎಂಬುದು ಬಡವರ ವಿರೋಧಿ ಧೋರಣೆ ಎಂದರು.
7 ಕೆಜಿ ಅಕ್ಕಿಯಲ್ಲಿ ಕಡಿತ ಮಾಡಿದ್ರೆ ಬಡವರ ಹೊಟ್ಟೆ ಮೇಲೆ ಹೊಡೆದ ಹಾಗೆ ಆಗುತ್ತೆ. ಕಾಂಗ್ರೆಸ್ ಪಕ್ಷ ಇದನ್ನು ತೀವ್ರವಾಗಿ ವಿರೋಧಿಸುತ್ತದೆ. ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಸದನದ ಒಳಗೆ ಹೊರಗೆ ನಾವು ಹೋರಾಟ ಮಾಡುತ್ತೇವೆ. ಅನ್ನಭಾಗ್ಯ ಅಕ್ಕಿ ಕಡಿತ ಮಾಡುವ ಯೋಚನೆ ಸರಕಾರದ ಮುಂದಿದ್ದರೆ ಅದನ್ನು ಕೂಡಲೇ ಕೈ ಬಿಡಬೇಕು. ಅನ್ನಭಾಗ್ಯ ಯೋಜನೆಯಿಂದ ಗುಳೆ ಪದ್ಧತಿ ಕಡಿಮೆ ಆಗಿದೆ. ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮವಿದು ಎಂದು ಸಿದ್ದರಾಮಯ್ಯ ತಿಳಿಸಿದರು.
ಇಂದಿರಾ ಕ್ಯಾಂಟೀನ್ಗೆ ರಾಜ್ಯ ಸರಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸಬೇಕು ಎಂದು ಹೇಳುತ್ತಿದ್ದಾರೆ. ನಿರಂತರವಾಗಿ ಇಂದಿರಾ ಕ್ಯಾಂಟೀನ್ ನಡೆಯಬೇಕಾದರೆ, ಅಲ್ಲಿ ಕ್ವಾಲಿಟಿ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ನಿರ್ವಹಣೆಯನ್ನು ರಾಜ್ಯ ಸರಕಾರ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ನಮ್ಮ ಸರಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರಕಾರ ರದ್ದು ಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು, ಎಚ್ಚರ ಇರಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಅನ್ನಭಾಗ್ಯಕ್ಕೆ ಕತ್ತರಿ ಹಾಕುವಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದು ಬಿಜೆಪಿಗೆ ಎಚ್ಚರಿಕೆ ರವಾನಿಸಿದ್ದಾರೆ.
ಅನ್ನ ಭಾಗ್ಯ ಸೇರಿದಂತೆ ಹಿಂದಿನ ಸರಕಾರ ಜಾರಿಗೊಳಿಸಿದ್ದ ಯೋಜನೆಗಳಿಗೆ ಕತ್ತರಿ ಪ್ರಯೋಗ ವಿರುದ್ಧ ಮಾಜಿ ಡಿಸಿಎಂ ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ದನಿ ಎತ್ತಿದ್ದಾರೆ. ಅನ್ನ ಭಾಗ್ಯ ಕತ್ತರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಎಸ್ವೈ ಕಿಸಾನ್ ಸಮ್ಮಾನ್ಗೆ ಹಣ ಹೊಂದಿಸಲು ಅನ್ನ ಭಾಗ್ಯದ ಅನುದಾನ ಕಡಿತಗೊಳಿಸಬಾರದು. ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಎಂದಿದ್ದಾರೆ.
ಯಾವ ಪ್ರಧಾನಿಯೂ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ: ಸಿದ್ದರಾಮಯ್ಯ
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ನಾಲ್ಕು ಕೋಟಿ ಜನರಿಗೆ 7 ಕೆಜಿ ಅಕ್ಕಿಯನ್ನ ಉಚಿತವಾಗಿ ನೀಡುತ್ತಿತ್ತು. ಬಿಜೆಪಿ ಸರಕಾರ ರಚನೆಯಾದ ಮೇಲೆ ಅನ್ನಭಾಗ್ಯ ಅಕ್ಕಿ ಕಡಿಮೆ ಮಾಡಲು ಚರ್ಚೆ ಮಾಡಿದ್ದಾರೆ ಎಂಬ ಮಾಹಿತಿ ಬಂದಿದೆ. ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ. ಆದರೆ ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎಂಬುದು ಬಡವರ ವಿರೋಧಿ ಧೋರಣೆ ಎಂದರು.
7 ಕೆಜಿ ಅಕ್ಕಿಯಲ್ಲಿ ಕಡಿತ ಮಾಡಿದ್ರೆ ಬಡವರ ಹೊಟ್ಟೆ ಮೇಲೆ ಹೊಡೆದ ಹಾಗೆ ಆಗುತ್ತೆ. ಕಾಂಗ್ರೆಸ್ ಪಕ್ಷ ಇದನ್ನು ತೀವ್ರವಾಗಿ ವಿರೋಧಿಸುತ್ತದೆ. ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಸದನದ ಒಳಗೆ ಹೊರಗೆ ನಾವು ಹೋರಾಟ ಮಾಡುತ್ತೇವೆ. ಅನ್ನಭಾಗ್ಯ ಅಕ್ಕಿ ಕಡಿತ ಮಾಡುವ ಯೋಚನೆ ಸರಕಾರದ ಮುಂದಿದ್ದರೆ ಅದನ್ನು ಕೂಡಲೇ ಕೈ ಬಿಡಬೇಕು. ಅನ್ನಭಾಗ್ಯ ಯೋಜನೆಯಿಂದ ಗುಳೆ ಪದ್ಧತಿ ಕಡಿಮೆ ಆಗಿದೆ. ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮವಿದು ಎಂದು ಸಿದ್ದರಾಮಯ್ಯ ತಿಳಿಸಿದರು.
ಇಂದಿರಾ ಕ್ಯಾಂಟೀನ್ಗೆ ರಾಜ್ಯ ಸರಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸಬೇಕು ಎಂದು ಹೇಳುತ್ತಿದ್ದಾರೆ. ನಿರಂತರವಾಗಿ ಇಂದಿರಾ ಕ್ಯಾಂಟೀನ್ ನಡೆಯಬೇಕಾದರೆ, ಅಲ್ಲಿ ಕ್ವಾಲಿಟಿ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ನಿರ್ವಹಣೆಯನ್ನು ರಾಜ್ಯ ಸರಕಾರ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ನಮ್ಮ ಸರಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರಕಾರ ರದ್ದು ಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು, ಎಚ್ಚರ ಇರಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಅನ್ನಭಾಗ್ಯಕ್ಕೆ ಕತ್ತರಿ ಹಾಕುವಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದು ಬಿಜೆಪಿಗೆ ಎಚ್ಚರಿಕೆ ರವಾನಿಸಿದ್ದಾರೆ.
ಅನ್ನ ಭಾಗ್ಯ ಸೇರಿದಂತೆ ಹಿಂದಿನ ಸರಕಾರ ಜಾರಿಗೊಳಿಸಿದ್ದ ಯೋಜನೆಗಳಿಗೆ ಕತ್ತರಿ ಪ್ರಯೋಗ ವಿರುದ್ಧ ಮಾಜಿ ಡಿಸಿಎಂ ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ದನಿ ಎತ್ತಿದ್ದಾರೆ. ಅನ್ನ ಭಾಗ್ಯ ಕತ್ತರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಎಸ್ವೈ ಕಿಸಾನ್ ಸಮ್ಮಾನ್ಗೆ ಹಣ ಹೊಂದಿಸಲು ಅನ್ನ ಭಾಗ್ಯದ ಅನುದಾನ ಕಡಿತಗೊಳಿಸಬಾರದು. ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಎಂದಿದ್ದಾರೆ.
ಯಾವ ಪ್ರಧಾನಿಯೂ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ: ಸಿದ್ದರಾಮಯ್ಯ