ಆ್ಯಪ್ನಗರ

ಸಿದ್ದರಾಮಯ್ಯ ಪತ್ರ ವ್ಯವಹಾರ ಮತ್ತೆ ಮುಂದುವರಿಕೆ: ಸರಕಾರದ ಮೇಲೆ ಒತ್ತಡ

ಬಾದಾಮಿಯಲ್ಲಿ ಕೈಗಾರಿಕೆ ಹಾಗೂ ಪ್ರವಾಸಿಗರಿಗೆ ಸೂಕ್ತ ಮೂಲಸೌಕರ್ಯ ಕಲ್ಪಿಸುವಂತೆ ಬಾದಾಮಿಯ ಹಾಲಿ ಶಾಸಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

Vijaya Karnataka Web 4 Jul 2018, 5:47 pm
ಬಾದಾಮಿ: ರಾಜ್ಯ ಸರಕಾರದ ಮೇಲೆ ತಮ್ಮದೇ ಧಾಟಿಯಲ್ಲಿ ಒತ್ತಡ ಹೇರುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಸಮರ ಮುಂದುವರಿಸಿದ್ದಾರೆ. ಈ ಹಿಂದೆ ಸರಕಾರಕ್ಕೆ ಹಲವಾರು ಪತ್ರಗಳನ್ನು ಬರೆದಿದ್ದ ಸಿದ್ದರಾಮಯ್ಯ ಮತ್ತೆ ಪತ್ರ ವ್ಯವಹಾರ ಮುಂದುವರಿಸಿದ್ದಾರೆ.
Vijaya Karnataka Web siddu


ಬಾದಾಮಿಯಲ್ಲಿ ಕೈಗಾರಿಕಾ ಸಂಸ್ಥೆ ಹಾಗೂ ಪ್ರವಾಸಿಗರಿಗೆ ಸೂಕ್ತ ಮೂಲಸೌಕರ್ಯ ಕಲ್ಪಿಸುವಂತೆ ಬಾದಾಮಿಯ ಹಾಲಿ ಶಾಸಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಸರಕಾರದೊಂದಿಗೆ ತಮ್ಮ ಪತ್ರ ವ್ಯವಹಾರವನ್ನು ಮುಂದುವರೆಸಿರುವ ಅವರು, ಬೆಂಗಳೂರು ಅಭಿವೃದ್ಧಿ ಹಾಗೂ ಯೋಜನಾ ಸಚಿವ ಕೆ.ಜೆ. ಜಾರ್ಜ್‌ ಮತ್ತು ಪ್ರವಾಸೊದ್ಯಮ ಸಚಿವ ಸಾ.ರಾ ಮಹೇಶ್ ಅವರಿಗೆ ಪತ್ರ ಬರೆದಿದ್ದಾರೆ.

ಕೆರೂರು, ಗುಳೆದಗುಡ್ಡ, ಬದಾಮಿಯಲ್ಲಿ ಈ ವರೆಗೆ ಕೈಗಾರಿಗಳ ಸಂಖ್ಯೆ ಕಡಿಮೆ. ತಕ್ಷಣ ಕೈಗಾರಿಕೆ ಸ್ಥಾಪಿಸುವ ಕರಿತು ವಿಶೇಷ ಸಭೆ ಆಯೋಜಿಸಬೇಕಿದೆ. ಈ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಯಿಂದ ಅನೇಕ ಜನರಿಗೆ ಅನುಕೂಲವಾಗಲಿದೆ ಎಂದು ಸಿದ್ದರಾಮಯ್ಯ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಬದಾಮಿ,ಐಹೊಳೆ, ಪಟ್ಟದಕಲ್ಲು ಹಾಗೂ ಬನಶಂಕರಿಗೆ ಬರುವ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಪತ್ರದಲ್ಲಿ ವಿವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ