ಆ್ಯಪ್ನಗರ

ಬೇಲ್‌ ಮೇಲೆ ಹೊರಗಿರೋ ಹುಡುಗ ನನ್ನ ಪ್ರಾಮಾಣಿಕತೆ ಪ್ರಶ್ನಿಸ್ತಾನೆ: ನಲಪಾಡ್‌ ವಿರುದ್ಧ ರಮ್ಯಾ ಕಿಡಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ದೊಡ್ಡ ಬಿರುಗಾಳಿ ಎಬ್ಬಿಸಿದ್ದಾರೆ. ಟ್ವೀಟ್‌ ಮೂಲಕವೇ ಡಿಕೆ ಶಿವಕುಮಾರ್‌ ಹಾಗೂ ಅವರ ಬೆಂಬಲಿಗರನ್ನು ರಮ್ಯಾ ಕಾಡುತ್ತಿದ್ದಾರೆ. ತನ್ನ ಅಸ್ತಿತ್ವ ತೋರಿಸಲು ರಮ್ಯಾ ಈಗ ಬಂದಿದ್ದಾರಾ ಎಂದಿದ್ದ ನಲಪಾಡ್‌ ವಿರುದ್ಧ ಕಿಡಿಕಾರಿರುವ ನಟಿ, ಬೇಲ್‌ ಮೇಲೆ ಹೊರಗಿರೋ ಹುಡುಗ ನನ್ನ ಪ್ರಾಮಾಣಿಕತೆ ಪ್ರಶ್ನಿಸ್ತಾನೆ ಎಂದಿದ್ದಾರೆ.

Authored byಅವಿನಾಶ ವಗರನಾಳ | Vijaya Karnataka Web 13 May 2022, 10:02 am

ಹೈಲೈಟ್ಸ್‌:


  • ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎಬ್ಬಿಸಿದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ
  • ಬುಧವಾರ ಡಿಕೆ ಶಿವಕುಮಾರ್‌, ಗುರುವಾರ ಮೊಹಮದ್‌ ನಲಪಾಡ್‌ ವಿರುದ್ಧ ಕಿಡಿ
  • ಬೇಲ್‌ ಮೇಲೆ ಹೊರಗಿರೋ ಹುಡುಗ ನನ್ನ ಪ್ರಾಮಾಣಿಕತೆ ಪ್ರಶ್ನಿಸ್ತಾನೆ ಎಂದ ರಮ್ಯಾ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ramya
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ಅವರ ಬೆಂಬಲಿಗರ ಮೇಲೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸಮರ ಸಾರಿದಂತೆ ಕಾಣುತ್ತಿದೆ. ರಮ್ಯಾ ಟ್ವೀಟ್‌ ಬೆನ್ನಲ್ಲೇ ಇಷ್ಟು ದಿನ ರಮ್ಯಾ ಎಲ್ಲಿದ್ದರೂ, ಈಗ ತನ್ನ ಅಸ್ತಿತ್ವ ತೋರಿಸಲು ಬಂದಿದ್ದಾರಾ ಎಂದು ಪ್ರಶ್ನಿಸಿದ್ದ ಮೊಹಮದ್‌ ನಲಪಾಡ್‌ಗೆ ತಿರುಗೇಟು ನೀಡಿರುವ ರಮ್ಯಾ, ಜಾಮೀನಿನ ಮೇಲೆ ಹೊರಗಿರುವ ಹುಡುಗ ನನ್ನ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತಿದ್ದಾನೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ರಮ್ಯಾ, ಜಾಮೀನಿನ ಮೇಲೆ ಹೊರಗಿರುವ ಈ ಹುಡುಗ ಮೊಹಮದ್‌ ನಲಪಾಡ್‌, ಕರ್ನಾಟಕ ಯುವ ಕಾಂಗ್ರೆಸ್‌ನ ಗೌರವಾನ್ವಿತ ಅಧ್ಯಕ್ಷರು, ಶಾಸಕ ಎನ್‌ಎ ಹ್ಯಾರಿಸ್‌ ಅವರ ಪುತ್ರ. ಅವರು ನನ್ನ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತಿದ್ದಾರೆ. ಇದು ಅದ್ಭುತ ಎಂದಿದ್ದಾರೆ. ಅದಲ್ಲದೇ ನಲಪಾಡ್‌ ವಿರುದ್ಧ ಕೇಳಿಬಂದಿರುವ ಆರೋಪಗಳ ವರದಿಗಳನ್ನು ಕೂಡ ಲಗತ್ತಿಸಿದ್ದಾರೆ.


ರಮ್ಯಾ ವಿರುದ್ಧ ಕಿಡಿಕಾರಿದ್ದ ನಲಪಾಡ್‌!
ಡಿಕೆ ಶಿವಕುಮಾರ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದ ರಮ್ಯಾ ವಿರುದ್ಧ ಮೊಹಮದ್‌ ನಲಪಾಡ್‌ ಕಿಡಿಕಾರಿದ್ದರು. ಉಡುಪಿಯಲ್ಲಿ ಮಾತನಾಡಿದ್ದ ಅವರು, ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ, ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರೂ ಏನೋ? ಎಲ್ಲೂ ಇಲ್ಲದ ರಮ್ಯಾ ಸಡನ್ನಾಗಿ ಯಾಕೆ ಪ್ರತ್ಯಕ್ಷರಾದ್ರೋ ಗೊತ್ತಿಲ್ಲ, ರಮ್ಯಾ ತನ್ನ ಅಸ್ತಿತ್ವ ತೋರಿಸಲು ಬಂದಿದ್ದಾರಾ? ನಾನು ಒಬ್ಬಳು ಇದೀನಿ ಅಂತ ತೋರಿಸಿಕೊಳ್ಳುತ್ತಿದ್ದಾರಾ? ಎಂದು ಪ್ರಶ್ನಿಸಿದ್ದರು.

ಎಂಬಿ ಪಾಟೀಲ್‌ ಬಗ್ಗೆ ಡಿಕೆ ಶಿವಕುಮಾರ್‌ ಹೇಳಿಕೆಗೆ ರಮ್ಯಾ ಅಚ್ಚರಿ! ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಲ್ಲವೇ ಎಂದು ಪ್ರಶ್ನೆ
ಅದಲ್ಲದೇ, ಯಾವುದಾದರೂ ಒಂದು ಕುರ್ಚಿ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರಾ? ರಮ್ಯಾ ಬಂದದ್ದು ಯಾಕೆ; ಹೀಗೆಲ್ಲ ಮಾಡುತ್ತಿರುವುದು ಯಾವುದಕ್ಕೆ ಅಂತ ನಾವು ಮೊದಲು ಅರ್ಥಮಾಡಿಕೊಳ್ಳಬೇಕು. ನಾನು ರಮ್ಯಾ ಅವರ ವಿರುದ್ಧ ಇಲ್ಲ, ನಟಿ ರಮ್ಯಾ ಇಂತಹ ಚೀಪ್ ಪಾಲಿಟಿಕ್ಸ್ ಮಾಡಬಾರದು. ಅವರ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಮೊಹಮದ್‌ ನಲಪಾಡ್‌ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಮ್ಯಾ ಜಾಮೀನು ಮೇಲೆ ಹೊರಗಿರುವ ಹುಡುಗ ನನ್ನ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತಿದ್ದಾನೆ ಎಂದಿದ್ದಾರೆ.

ನಿಮಗೆ ಆ ತೊಂದರೆ ಬೇಡ! ನನ್ನ ನಾನೇ ಟ್ರೋಲ್‌ ಮಾಡ್ಕೋತಿನಿ: ಡಿಕೆಶಿ ವಿರುದ್ಧ ಸಿಡಿದೆದ್ದ ರಮ್ಯಾ
ರಮ್ಯಾ VS ಡಿಕೆಶಿ ಸಮರ!
ಮಾಜಿ ಸಚಿವ ಎಂಬಿ ಪಾಟೀಲ್‌ ಹಾಗೂ ಸಚಿವ ಸಿಎನ್‌ ಅಶ್ವತ್ಥ್‌ ನಾರಾಯಣ ಅವರು ಭೇಟಿ ಮಾಡಿದ್ದಾರೆ ಎಂದು ಹೇಳಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿರುದ್ಧ ರಮ್ಯಾ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷಾತೀತವಾಗಿ ಎಲ್ಲ ನಾಯಕರು ಎಲ್ಲರನ್ನೂ ಭೇಟಿಯಾಗುತ್ತಾರೆ. ಆದರೆ, ಕಟ್ಟಾ ಕಾಂಗ್ರೆಸ್ಸಿಗ ಎಂಬಿ ಪಾಟೀಲ್‌ ಬಗ್ಗೆ ಡಿಕೆ ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಚ್ಚರಿ ತಂದಿದೆ. ಕಾಂಗ್ರೆಸ್‌ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದರು.

ಡಿಕೆಶಿ v/s ಎಂ.ಬಿ ಪಾಟೀಲ್‌: ರಾಜ್ಯ ಕಾಂಗ್ರೆಸ್ ಆಂತರಿಕ ತಿಕ್ಕಾಟವನ್ನು ಬಹಿರಂಗಗೊಳಿಸಿದ ರಮ್ಯಾ ಟ್ವೀಟ್‌!
ರಮ್ಯಾ ಟ್ವೀಟ್‌ಗೆ ವಿರೋಧ ವ್ಯಕ್ತವಾದ ಬೆನ್ನಲ್ಲೇ, ನನ್ನ ಟ್ವೀಟ್‌ಗೆ ಕೌಂಟರ್‌ ನೀಡಿ ಟ್ರೋಲ್‌ ಮಾಡಿ ಎಂದು ಕಾಂಗ್ರೆಸ್‌ ಕಚೇರಿಯಿಂದ ಕಾಂಗ್ರೆಸ್‌ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಸಂದೇಶಗಳನ್ನು ಕಳುಹಿಸಲಾಗುತ್ತಿದೆ ಎಂದು ಸಂದೇಶಗಳ ಸ್ಕ್ರೀನ್‌ ಶಾಟ್‌ಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಅದಲ್ಲದೇ ಡಿಕೆ ಶಿವಕುಮಾರ್‌ ಅವರಿಗೂ ಕೂಡ ಈ ಟ್ವೀಟ್‌ ಅನ್ನು ಟ್ಯಾಗ್‌ ಮಾಡಿ ಗಮನ ಸೆಳೆದಿದ್ದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ