ಆ್ಯಪ್ನಗರ

ತಡರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲು!

ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರಿಗೆ ಎರಡು ದಿನಗಳಿಂದ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನಲೆ ವೈದ್ಯರ ಸೂಚನೆಯಂತೆ ನಗರದ ಮಣಿಪಾಲ ಆಸ್ಪತ್ರೆಗೆ ಸೋಮವಾರ ರಾತ್ರಿ ಅವರು ದಾಖಲಾಗಿದ್ದಾರೆ.

Vijaya Karnataka Web 4 Aug 2020, 7:31 am
ಬೆಂಗಳೂರು: ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರಿಗೆ ಎರಡು ದಿನಗಳಿಂದ ಜ್ವರ ಕೂಡಾ ಇತ್ತು. ಈ ಹಿನ್ನೆಲೆ ವೈದ್ಯರ ಸೂಚನೆಯಂತೆ ನಗರದ ಮಣಿಪಾಲ ಆಸ್ಪತ್ರೆಗೆ ಸೋಮವಾರ ರಾತ್ರಿ ದಾಖಲಾಗಿದ್ದಾರೆ.
Vijaya Karnataka Web 64189568


ಅಲ್ಲದೇ ವೈದ್ಯರ ಸೂಚನೆಯಂತೆ ಸಿದ್ದರಾಮಯ್ಯ ಅವರು ಕೋವಿಡ್ ತಪಾಸಣೆಗೆ ಒಳಗಾಗಿದ್ದು, ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೂಡ ಕೊರೊನಾ ಹಿನ್ನೆಲೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ತಡರಾತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿದಾಗ ಸಿಎಂ ಅವರನ್ನ ಭೇಟಿಯಾಗಲು ತೆರಳಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಸಿದ್ದರಾಮಯ್ಯ ಅವರು ಜ್ವರ ಹಿನ್ನೆಲೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ