ಆ್ಯಪ್ನಗರ

ದೇವೇಗೌಡರು ಆರೋಗ್ಯವಾಗಿದ್ದಾರೆ: ಜೆಡಿಎಸ್ ವಕ್ತಾರ

ದೇವೇಗೌಡರು ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಆರೋಗ್ಯವಾಗಿದ್ದು, ನಿಗದಿಯಂತೆ ಪಕ್ಷದ ಕಾರ್ಯಕರ್ತರ ಜತೆ ಸಭೆ ನಡೆಸಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.

Vijaya Karnataka Web 2 Feb 2019, 3:13 pm
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆರೋಗ್ಯ ಕುರಿತು ಹರಿದಾಡುತ್ತಿರುವ ಸುದ್ದಿ ಶುದ್ಧ ಸುಳ್ಳು ಹಾಗೂ ಆಧಾರ ರಹಿತ ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
Vijaya Karnataka Web hdd


ದೇವೇಗೌಡರು ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಆರೋಗ್ಯವಾಗಿದ್ದು, ನಿಗದಿಯಂತೆ ಪಕ್ಷದ ಕಾರ್ಯಕರ್ತರ ಜತೆ ಸಭೆ ನಡೆಸಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಆಸ್ಪತ್ರೆಗೆ ತೆರಳುವು ಮುನ್ನ ಮಾಧ್ಯಮ ಮಿತ್ರರ ಜತೆ ಮಾತನಾಡಿರುವ ದೇವೇಗೌಡರು. 'ಕಾಲು ಸ್ವಲ್ಪ ಉಳುಕಿದ್ದು, ಎಂಆರ್‌ಐ ಮಾಡಿಸಲು ಹೊಗುತ್ತಿದ್ದೇವೆ. ಯಾವುದೇ ತೊಂದರೆ ಇಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪದ್ಮನಾಭನಗರದ ನಿವಾಸದಲ್ಲಿ ಬಾತ್ ರೂಮ್‌ಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದಿದ್ದು, ಕಾಲಿಗೆ ಸಣ್ಣ ಪೆಟ್ಟಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ