ಬೆಂಗಳೂರು: ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ರಟ್ಟೀ ಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ನಾಮಪತ್ರವನ್ನು ವಾಪಸ್ ಪಡೆದುಕೊಳ್ಳಲು ಬಿಜೆಪಿ ಒತ್ತಡ ಕಾರಣ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನಸಿಕವಾಗಿ ಅವರ ಮೇಲೆ ಒತ್ತಡ ತಂದಿದ್ದಾರೆ. ಇದಕ್ಕೆ ಸಿಎಂ ಯಡಿಯೂರಪ್ಪನವರ ಮಗನೇ ನೇತೃತ್ವ ವಹಿಸಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.
'ಸಿದ್ದರಾಮಯ್ಯ ಏಕಾಂಗಿಯಲ್ಲ.. ಸಿಎಂ ಆಗಿದ್ರೂ ಯಡಿಯೂರಪ್ಪ ಏಕಾಂಗಿ': ತಂಗಡಗಿ ವರಸೆ!
ಹಿರೇಕೆರೂರು ಜೆಡಿಎಸ್ ಅಭ್ಯರ್ಥಿಯಾಗಿ ರಟ್ಟೀ ಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಾಗಿಯೇ ಸ್ಪರ್ಧಿಸುತ್ತೇನೆ ಎಂದಿದ್ದರು. ಹೀಗಾಗಿ ಅವರಿಗೆ ಬಿ-ಫಾರಂ ಕಳಿಸಿದ್ದೆವು. ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಅವರ ಮೇಲೆ ಒತ್ತಡ ತಂದು ನಾಮಪತ್ರ ವಾಪಸ್ ಪಡೆಯುವಂತೆ ಮಾಡಲಾಗಿದೆ.
'ಸಿಎಂ ಪರಿಸ್ಥಿತಿ ನೋಡಿ ಅಯ್ಯೋ ಎನಿಸುತ್ತಿದೆ': ಶಿವರಾಜ್ ತಂಗಡಗಿ ವ್ಯಂಗ್ಯ
ಮಾನಸಿಕವಾಗಿ ಅವರ ಮೇಲೆ ಒತ್ತಡ ತಂದಿದ್ದು, ಇದಕ್ಕೆ ಯಡಿಯೂರಪ್ಪನವರ ಮಗನೇ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಸ್ವಾಮೀಜಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಈ ಹಿಂದೆ ಹಲವು ಸ್ವಾಮಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಗೆದ್ದು ಅಧಿಕಾರವನ್ನು ಸ್ವಾಮೀಜಿಗಳು ಅನುಭವಿಸಿದ್ದಾರೆ. ಉತ್ತರ ಪ್ರದೇಶದಲ್ಲೇ ಸ್ವಾಮಿ ಸಿಎಂ ಆಗಿಲ್ವೇ ಎಂದು ಪ್ರಶ್ನಿಸಿದರು.
ಸ್ವಾಮೀಜಿ ಮಾತ್ರ ಅಲ್ಲದೆ ಅಥಣಿಯ ಕ್ಷೇತ್ರದ ಅಭ್ಯರ್ಥಿಯೂ ನಾಮಪತ್ರ ಹಿಂಪಡೆದಿದ್ದಾರೆ. ಇದರ ಹೊರತಾಗಿ ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಬೆಂಬಲಿಸಿದ್ದೇವೆ. ಉಳಿದ 12 ಕಡೆಗಳಲ್ಲಿ ನಾವು ಸ್ಪರ್ಧಿಸುತ್ತಿದ್ದೇವೆ. ಆದರೆ ಇವತ್ತು ಹೆಚ್ಚು ಬಲಪ್ರಯೋಗಗಳು ನಡೆಯುತ್ತಿದ್ದು ಈ ಕಾರಣಕ್ಕಾಗಿಯೇ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
'ಸಿದ್ದರಾಮಯ್ಯ ಏಕಾಂಗಿಯಲ್ಲ.. ಸಿಎಂ ಆಗಿದ್ರೂ ಯಡಿಯೂರಪ್ಪ ಏಕಾಂಗಿ': ತಂಗಡಗಿ ವರಸೆ!
ಹಿರೇಕೆರೂರು ಜೆಡಿಎಸ್ ಅಭ್ಯರ್ಥಿಯಾಗಿ ರಟ್ಟೀ ಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಾಗಿಯೇ ಸ್ಪರ್ಧಿಸುತ್ತೇನೆ ಎಂದಿದ್ದರು. ಹೀಗಾಗಿ ಅವರಿಗೆ ಬಿ-ಫಾರಂ ಕಳಿಸಿದ್ದೆವು. ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಅವರ ಮೇಲೆ ಒತ್ತಡ ತಂದು ನಾಮಪತ್ರ ವಾಪಸ್ ಪಡೆಯುವಂತೆ ಮಾಡಲಾಗಿದೆ.
'ಸಿಎಂ ಪರಿಸ್ಥಿತಿ ನೋಡಿ ಅಯ್ಯೋ ಎನಿಸುತ್ತಿದೆ': ಶಿವರಾಜ್ ತಂಗಡಗಿ ವ್ಯಂಗ್ಯ
ಮಾನಸಿಕವಾಗಿ ಅವರ ಮೇಲೆ ಒತ್ತಡ ತಂದಿದ್ದು, ಇದಕ್ಕೆ ಯಡಿಯೂರಪ್ಪನವರ ಮಗನೇ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಸ್ವಾಮೀಜಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಈ ಹಿಂದೆ ಹಲವು ಸ್ವಾಮಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಗೆದ್ದು ಅಧಿಕಾರವನ್ನು ಸ್ವಾಮೀಜಿಗಳು ಅನುಭವಿಸಿದ್ದಾರೆ. ಉತ್ತರ ಪ್ರದೇಶದಲ್ಲೇ ಸ್ವಾಮಿ ಸಿಎಂ ಆಗಿಲ್ವೇ ಎಂದು ಪ್ರಶ್ನಿಸಿದರು.
ಸ್ವಾಮೀಜಿ ಮಾತ್ರ ಅಲ್ಲದೆ ಅಥಣಿಯ ಕ್ಷೇತ್ರದ ಅಭ್ಯರ್ಥಿಯೂ ನಾಮಪತ್ರ ಹಿಂಪಡೆದಿದ್ದಾರೆ. ಇದರ ಹೊರತಾಗಿ ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಬೆಂಬಲಿಸಿದ್ದೇವೆ. ಉಳಿದ 12 ಕಡೆಗಳಲ್ಲಿ ನಾವು ಸ್ಪರ್ಧಿಸುತ್ತಿದ್ದೇವೆ. ಆದರೆ ಇವತ್ತು ಹೆಚ್ಚು ಬಲಪ್ರಯೋಗಗಳು ನಡೆಯುತ್ತಿದ್ದು ಈ ಕಾರಣಕ್ಕಾಗಿಯೇ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.