ಆ್ಯಪ್ನಗರ

ರಾಜ್ಯ ಸರಕಾರಿ ನೌಕರರಿಗೆ ನಾಲ್ಕನೇ ಶನಿವಾರ ರಜೆ: ಸಂಪುಟ ಒಪ್ಪಿಗೆ

ನಾಲ್ಕನೇ ಶನಿವಾರ ರಜೆ ಎಲ್ಲ ಇಲಾಖೆಗೆ ಅನ್ವಯ. ಆದರೆ ಈ ವರ್ಷದಿಂದಲೇ ಜಾರಿ ಅನುಮಾನ.‌ ಈ ವರ್ಷದ ರಜಾ ಕ್ಯಾಲೆಂಡರ್ ಈಗಾಗಲೇ ಬಿಡುಗಡೆಯಾಗಿರುವುದರಿಂದ ಸದ್ಯಕ್ಕೆ ಪರಿಷ್ಕರಣೆ ಅಸಾಧ್ಯ ಎಂದು ಹೇಳಲಾಗಿದೆ.

Vijaya Karnataka Web 6 Jun 2019, 5:57 pm
ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವರ ರಜೆ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
Vijaya Karnataka Web ವಿಧಾನಸೌಧ
ವಿಧಾನಸೌಧ


ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಪ್ಪಿಗೆ ನೀಡಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಈ ಮಾಹಿತಿ ನೀಡಿದರು.

ನಾಲ್ಕನೇ ಶನಿವಾರ ರಜೆ ಎಲ್ಲ ಇಲಾಖೆಗೆ ಅನ್ವಯ. ಆದರೆ ಈ ವರ್ಷದಿಂದಲೇ ಜಾರಿ ಅನುಮಾನ.‌ ಈ ವರ್ಷದ ರಜಾ ಕ್ಯಾಲೆಂಡರ್ ಈಗಾಗಲೇ ಬಿಡುಗಡೆಯಾಗಿರುವುದರಿಂದ ಸದ್ಯಕ್ಕೆ ಪರಿಷ್ಕರಣೆ ಅಸಾಧ್ಯ ಎಂದು ಹೇಳಲಾಗಿದೆ.

ನಾಲ್ಕನೇ ಶನಿವಾರದ ರಜೆಗೆ ಪ್ರತಿಯಾಗಿ ಸರಕಾರಿ ನೌಕರರ ಸಾಂದರ್ಭಿಕ ರಜೆ ಪೈಕಿ ಐದಕ್ಕೆ ಕತ್ತರಿ ಹಾಕಲಾಗಿದೆ. ಅದೇ ರೀತಿ ಯಾವುದೇ ಜಯಂತಿ ರಜೆಯನ್ನು ಕಡಿತ ಮಾಡದೇ ಇರಲು ತೀರ್ಮಾನಿಸಲಾಗಿದೆ.

ಸರಕಾರಿ ನೌಕರರಿಗೆ ಒಟ್ಟಾರೆಯಾಗಿ ಏಳು ರಜೆ ಹೆಚ್ಚುವರಿಯಾಗಿ ದೊರೆಯಲಿದೆ.

ಜಯಂತಿಗಳ ರಜೆ ಕಡಿತಗೊಳಿಸಿ ನಾಲ್ಕನೇ ಶನಿವಾರ ರಜೆ ನೀಡಲು 6ನೇ ವೇತನ ಆಯೋಗದ ಶಿಫಾರಸಿನಲ್ಲಿ ತಿಳಿಸಲಾಗಿತ್ತು. ಈ ಕುರಿತು ಕೃಷ್ಣ ಭೈರೇಗೌಡ ನೇತೃತ್ವದ ಸಂಪುಟ ಉಪ ಸಮಿತಿ ವರದಿ ನೀಡಿತ್ತು. ಆದರೆ ಸದ್ಯಕ್ಕೆ ಯಾವುದೇ ಜಯಂತಿಯ ರಜೆ ಕಡಿತಗೊಳಿಸದಿರಲು ತೀರ್ಮಾನಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ