ಆ್ಯಪ್ನಗರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಮಾರ್ಚ್‌ 27 ರಿಂದ ಏಪ್ರಿಲ್‌ 9ರವರೆಗೆ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಹಿಂದುರುಗುವಾಗ 'ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರ'ವನ್ನು ತೋರಿಸಿ ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

Vijaya Karnataka 20 Feb 2020, 5:04 pm
ಬೆಂಗಳೂರು: ಮಾರ್ಚ್‌ 27 ರಿಂದ ಏಪ್ರಿಲ್‌ 9ರ ವರೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ನಡೆಯಲಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ನಿಗಮವು ಅವಕಾಶ ಕಲ್ಪಿಸಿದೆ.
Vijaya Karnataka Web KSRTC Bus


ಸಾಮಾನ್ಯವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯಲ್ಲದೆ ಬೇರೆಡೆಯು ಪರೀಕ್ಷೆ ಇರುತ್ತದೆ. ಕೆಎಸ್‌ಆರ್‌ಟಿಸಿ ಪಾಸ್‌ ಹೊಂದಿದ್ದರೂ ಶಾಲೆ ಮಾರ್ಗವಲ್ಲದೆ ಬೇರೆ ಮಾರ್ಗದಲ್ಲಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ.

ಈ ಹಿನ್ನೆಲೆಯಲ್ಲಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಉಚಿತ ಪ್ರಯಾಣಕ್ಕೆ ನಿಗಮವು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ.

ಹಾಲ್‌ ಟಿಕೆಟ್‌ ತೋರಿಸಿದರೆ ಸಾಕು

ಇದರ ಅನ್ವಯ ಮಾರ್ಚ್‌ 27 ರಿಂದ ಏಪ್ರಿಲ್‌ 9ರವರೆಗೆ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಹಿಂದುರುಗುವಾಗ 'ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರ'ವನ್ನು ತೋರಿಸಿ ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ನಿಗಮ ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ