ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಮಾಜಿ ಡಿಸಿಎಂ ಜಿ.ಪರಮೇಶ್ವರ್ ರಾಜ್ಯ ಕಾಂಗ್ರೆಸ್ ವಿದ್ಯಮಾನದ ಬಗ್ಗೆ ವಿವರ ಒಪ್ಪಿಸಿದ್ದಾರೆ.
ಕಳೆದ ವಾರ ದಿಲ್ಲಿಗೆ ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ 2 ದಿನ ವಾಸ್ತವ್ಯ ಹೂಡಿದ್ದರೂ ಸೋನಿಯಾ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಆದರೆ, ಸೋನಿಯಾ ಅವರನ್ನು ಮಂಗಳವಾರ ಭೇಟಿಯಾಗಿದ್ದ ಪರಮೇಶ್ವರ್ ಸುಮಾರು 45 ನಿಮಿಷ ಸಮಾಲೋಚಿಸಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ.
ದೋಸ್ತಿ ಸರಕಾರ ಪತನದ ಬಳಿಕ ರಾಜ್ಯ ಕಾಂಗ್ರೆಸ್ನಲ್ಲೇ ಬಣ ರಾಜಕೀಯ ಚುರುಕಾಗಿದೆ. ಪ್ರತಿಪಕ್ಷದ ನಾಯಕನ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಮತ್ತೊಂದೆಡೆ ಪಕ್ಷದ ಸಂಘಟನೆಗೆ ಹಿನ್ನಡೆಯಾಗಿದ್ದು ಕಾರ್ಯಕರ್ತರ ಆತ್ಮಸ್ಥೈರ್ಯ ಕುಸಿದಿದೆ. ಈ ಎಲ್ಲವಿಚಾರವನ್ನು ಸೋನಿಯಾ ಗಾಂಧಿ ಗಮನಕ್ಕೆ ತಂದರು. ಪಕ್ಷಕ್ಕೆ ಪುನಶ್ಚೇತನವಾಗಬೇಕು. ಪಕ್ಷ ನಿಷ್ಟರಿಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಸಲಹೆ ನೀಡಿದರು ಎನ್ನಲಾಗಿದೆ.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪಕ್ಷ ವಹಿಸಿದ್ದ ಎಲ್ಲಜವಾಬ್ದಾರಿಯನ್ನೂ ಅವರು ಸಮರ್ಥವಾಗಿ ನಿಭಾಯಿಸಿದ್ದರು. ಹಾಗಾಗಿ ಕಷ್ಟಕಾಲದಲ್ಲಿಅವರ ಬೆನ್ನಿಗೆ ಪಕ್ಷ ನಿಲ್ಲಬೇಕು ಎಂದು ಸೋನಿಯಾ ಬಳಿ ಪರಮೇಶ್ವರ್ ಪ್ರಸ್ತಾಪಿಸಿದರು ಎಂದು ತಿಳಿದು ಬಂದಿದೆ.
ಡಿಕೆಶಿ ಭೇಟಿ
ಈ ಮಧ್ಯೆ ದಿಲ್ಲಿಯ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದ ಡಿಕೆಶಿ ಅವರನ್ನೂ ಪರಮೇಶ್ವರ್ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು ಎಂದು ಮೂಲಗಳು ತಿಳಿಸಿವೆ.
ಕಳೆದ ವಾರ ದಿಲ್ಲಿಗೆ ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ 2 ದಿನ ವಾಸ್ತವ್ಯ ಹೂಡಿದ್ದರೂ ಸೋನಿಯಾ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಆದರೆ, ಸೋನಿಯಾ ಅವರನ್ನು ಮಂಗಳವಾರ ಭೇಟಿಯಾಗಿದ್ದ ಪರಮೇಶ್ವರ್ ಸುಮಾರು 45 ನಿಮಿಷ ಸಮಾಲೋಚಿಸಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ.
ದೋಸ್ತಿ ಸರಕಾರ ಪತನದ ಬಳಿಕ ರಾಜ್ಯ ಕಾಂಗ್ರೆಸ್ನಲ್ಲೇ ಬಣ ರಾಜಕೀಯ ಚುರುಕಾಗಿದೆ. ಪ್ರತಿಪಕ್ಷದ ನಾಯಕನ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಮತ್ತೊಂದೆಡೆ ಪಕ್ಷದ ಸಂಘಟನೆಗೆ ಹಿನ್ನಡೆಯಾಗಿದ್ದು ಕಾರ್ಯಕರ್ತರ ಆತ್ಮಸ್ಥೈರ್ಯ ಕುಸಿದಿದೆ. ಈ ಎಲ್ಲವಿಚಾರವನ್ನು ಸೋನಿಯಾ ಗಾಂಧಿ ಗಮನಕ್ಕೆ ತಂದರು. ಪಕ್ಷಕ್ಕೆ ಪುನಶ್ಚೇತನವಾಗಬೇಕು. ಪಕ್ಷ ನಿಷ್ಟರಿಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಸಲಹೆ ನೀಡಿದರು ಎನ್ನಲಾಗಿದೆ.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪಕ್ಷ ವಹಿಸಿದ್ದ ಎಲ್ಲಜವಾಬ್ದಾರಿಯನ್ನೂ ಅವರು ಸಮರ್ಥವಾಗಿ ನಿಭಾಯಿಸಿದ್ದರು. ಹಾಗಾಗಿ ಕಷ್ಟಕಾಲದಲ್ಲಿಅವರ ಬೆನ್ನಿಗೆ ಪಕ್ಷ ನಿಲ್ಲಬೇಕು ಎಂದು ಸೋನಿಯಾ ಬಳಿ ಪರಮೇಶ್ವರ್ ಪ್ರಸ್ತಾಪಿಸಿದರು ಎಂದು ತಿಳಿದು ಬಂದಿದೆ.
ಡಿಕೆಶಿ ಭೇಟಿ
ಈ ಮಧ್ಯೆ ದಿಲ್ಲಿಯ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದ ಡಿಕೆಶಿ ಅವರನ್ನೂ ಪರಮೇಶ್ವರ್ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು ಎಂದು ಮೂಲಗಳು ತಿಳಿಸಿವೆ.