ಆ್ಯಪ್ನಗರ

Bharat Jodo Yatra: ಕರ್ನಾಟಕದಲ್ಲಿ ಮೊದಲ ಬಾರಿಗೆ ಒಟ್ಟಾಗಿ ಹೆಜ್ಜೆ ಹಾಕಲಿರುವ ಗಾಂಧಿ ಕುಟುಂಬ

ಭಾರತ್ ಜೋಡೋ ಯಾತ್ರೆಯಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಒಟ್ಟಾಗಿ ಗಾಂಧಿ ಕುಟುಂಬ ಹೆಜ್ಜೆ ಹಾಕಲಿದೆ. ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸಾಥ್ ನೀಡಲಿದ್ದಾರೆ. ಇನ್ನೇ‌ನು ರಾಜ್ಯದಲ್ಲಿ ಆರೇಳು ತಿಂಗಳಲ್ಲಿ ಚುನಾವಣೆ ಎದುರಾಗುತ್ತಿರುವುದರಿಂದ ಈ ನಡಿಗೆ ಮಹತ್ವ ಪಡೆದುಕೊಂಡಿದೆ. ಗಾಂಧಿ ಕುಟುಂಬ ಒಟ್ಟಾಗಿ ರಾಜ್ಯದಲ್ಲಿ ಹೆಜ್ಜೆ ಹಾಕುವುದರಿಂದ ರಾಜ್ಯ ಕಾಂಗ್ರೆಸ್ ನಾಯಕರಿಗೂ ಮತ್ತಷ್ಟು ಹುಮ್ಮಸ್ಸು ಸಿಗಲಿದೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 3 Oct 2022, 9:54 am
ಮೈಸೂರು: ಭಾರತ್ ಜೋಡೋ ಯಾತ್ರೆಯಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಒಟ್ಟಾಗಿ ಗಾಂಧಿ ಕುಟುಂಬ ಹೆಜ್ಜೆ ಹಾಕಲಿದೆ. ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸಾಥ್ ನೀಡಲಿದ್ದಾರೆ. ಇನ್ನೇ‌ನು ರಾಜ್ಯದಲ್ಲಿ ಆರೇಳು ತಿಂಗಳಲ್ಲಿ ಚುನಾವಣೆ ಎದುರಾಗುತ್ತಿರುವುದರಿಂದ ಈ ನಡಿಗೆ ಮಹತ್ವ ಪಡೆದುಕೊಂಡಿದೆ. ಗಾಂಧಿ ಕುಟುಂಬ ಒಟ್ಟಾಗಿ ರಾಜ್ಯದಲ್ಲಿ ಹೆಜ್ಜೆ ಹಾಕುವುದರಿಂದ ರಾಜ್ಯ ಕಾಂಗ್ರೆಸ್ ನಾಯಕರಿಗೂ ಮತ್ತಷ್ಟು ಹುಮ್ಮಸ್ಸು ಸಿಗಲಿದೆ.
Vijaya Karnataka Web Rahul, Priyanka ,sonia
ಸಂಗ್ರಹ ಚಿತ್ರ


Bharat Jodo Yatra | ಕಾಂಗ್ರೆಸ್ ಪಾದಯಾತ್ರೆಯ ನಾಲ್ಕನೇ ದಿನದ ಹೈಲೈಟ್ಸ್ ಇಲ್ಲಿದೆ..
ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜ್ಯ ಪ್ರವಾಸದ ವಿವರ ಇಲ್ಲಿದೆ..

- ರಾಜ್ಯಕ್ಕೆ ಆಗಮಿಸಲಿದ್ದಾರೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ

- ಅಕ್ಟೋಬರ್ 3 ಮಧ್ಯಾಹ್ನ 12ಕ್ಕೆ ಮೈಸೂರಿಗೆ ಸೋನಿಯಾ ಗಾಂಧಿ ಆಗಮನ

- ಹೆಲಿಕಾಪ್ಟರ್ ಮೂಲಕ ಮಡಿಕೇರಿಗೆ ತೆರಳಲಿರುವ ಸೋನಿಯಾ

- ಸೋನಿಯಾ ಆಗಮನ ಹಿನ್ನೆಲೆಯಲ್ಲಿ ಪಾದಯಾತ್ರೆ ಮುಗಿಸಿ ಕೊಡಗು ತೆರಳಲಿರುವ ರಾಹುಲ್

- 4 ಹಾಗೂ 5 ರಂದು ಪಾದಯಾತ್ರೆಗೆ ವಿರಾಮ

- ಎರಡು ದಿನ ತಾಯಿ ಜೊತೆ ಕೊಡಗಿನಲ್ಲಿ ಉಳಿದುಕೊಳ್ಳಲಿರುವ ರಾಹುಲ್

- ಅಕ್ಟೋಬರ್ 6 ರಂದು ಮಂಡ್ಯ ಜಿಲ್ಲೆಯ ಮಹದೇಶ್ವರಿ ದೇವಸ್ಥಾನದಿಂದ ಪಾದಯಾತ್ರೆ ಆರಂಭ

- ಅಂದು ಮೇಲುಕೋಟೆಯಲ್ಲಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿರುವ ಸೋನಿಯಾ ಗಾಂಧಿ

- ರಾಹುಲ್ ಜೊತೆ ಸ್ವಲ್ಪ ಹೊತ್ತು ಪಾದಯಾತ್ರೆಯಲ್ಲಿ ಸೋನಿಯಾ ಭಾಗಿ

- ಅಕ್ಟೋಬರ್ 7 ರಂದು ರಾಜ್ಯಕ್ಕೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ

- ಸಹೋದರ ರಾಹುಲ್ ಜೊತೆಗೆ ಹೆಜ್ಜೆ ಹಾಕಲಿರುವ ಪ್ರಿಯಾಂಕಾ ಗಾಂಧಿ

- ನಾಗಮಂಗಲದಲ್ಲಿ ಹೆಜ್ಜೆ ಹಾಕಲಿರುವ ಪ್ರಿಯಾಂಕಾ

- ಆದಿ ಚುಂಚನಗಿರಿ ಮಠಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ ಸಾಧ್ಯತೆ
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ