ಆ್ಯಪ್ನಗರ

ಅನಿಲ ಭಾಗ್ಯಕ್ಕೆ ನೆರವು ನೀಡಿ

ಕೇಂದ್ರ ಸರ್ಕಾರದ ಉಜ್ವಲಾ ಯೋಜನೆಗೆ ಪೂರಕವಾಗಿ ಜಾರಿಗೊಳಿಸುತ್ತಿರುವ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗೆ ಬೆಂಬಲ ನೀಡುವಂತೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ...

Vijaya Karnataka 11 Sep 2018, 5:00 am
ಹೊಸದಿಲ್ಲಿ: ಕೇಂದ್ರ ಸರ್ಕಾರದ ಉಜ್ವಲಾ ಯೋಜನೆಗೆ ಪೂರಕವಾಗಿ ಜಾರಿಗೊಳಿಸುತ್ತಿರುವ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗೆ ಬೆಂಬಲ ನೀಡುವಂತೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ರಾಜ್ಯ ಸರ್ಕಾರ ಕೋರಿದೆ.
Vijaya Karnataka Web BNG-1009-2-2-PHOTO 3


ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಸೋಮವಾರ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದ್ದು, ಹೆಚ್ಚುವರಿ ಅಡುಗೆ ಅನಿಲ ಸಂಪರ್ಕಗಳನ್ನು ಬಿಡುಗಡೆ ಮಾಡಲು ತೈಲ ಮಾರಾಟ ಕಂಪನಿಗಳಿಗೆ ಸೂಚಿಸುವಂತೆಯೂ ವಿನಂತಿಸಿದರು.

''ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಉಚಿತ ಎಲ್‌.ಪಿ.ಜಿ. ಪಡೆಯಲು ಆಯ್ಕೆಯಾಗದ ಬಡವರಿಗೆ ಉಚಿತ ಎಲ್‌.ಪಿ.ಜಿ. ಸಂಪರ್ಕ, ಎರಡು ಉಚಿತ ರೀಫಿಲ್‌ ಗಳನ್ನು ನೀಡುವುದಕ್ಕಾಗಿ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ರೂಪಿಸಲಾಗಿದೆ. ಮುಂದಿನ 18 ರಿಂದ 24 ತಿಂಗಳುಗಳಲ್ಲಿ 30 ಲಕ್ಷ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಸ್ತರಿಸಲು ಉದ್ದೇಶಿಸಲಾಗಿದೆ,'' ಎಂದು ಸಿಎಂ ವಿವರಿಸಿದರು.

''ಕರ್ನಾಟವನ್ನು ಸೀಮೆ ಎಣ್ಣೆ ಮುಕ್ತ ಮಾಡುವ ಗುರಿ ಸಾಧಿಸಲು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ತಿಂಗಳಿಗೆ ಕನಿಷ್ಠ 1.5 ರಿಂದ 2 ಲಕ್ಷ ಹೊಸ ಸಂಪರ್ಕಗಳನ್ನು ಒದಗಿಸುವ ಅಗತ್ಯವಿದೆ. ಸರ್ಕಾರದಿಂದ ಭದ್ರತಾ ಠೇವಣಿಯನ್ನು ವಿತರಕರಿಗೆ ಪಾವತಿಸಲೂ ಅವಕಾಶ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ತೈಲ ಕಂಪನಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು,'' ಎಂದು ಸಿಎಂ ಮನವಿ ಮಾಡಿದ್ದಾರೆ.

ಈ ವಿಷಯವನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವ ಧರ್ಮೇಂದ್ರ ಪ್ರಧಾನ್‌ ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ