ಆ್ಯಪ್ನಗರ

ದಾಖಲೆ ಇಲ್ಲದ ವಿದೇಶಿಯರಿಗೆ ಗೇಟ್‌ಪಾಸ್‌: ಜಿ.ಪರಮೇಶ್ವರ್‌

ಅಗತ್ಯ ದಾಖಲಾತಿ ಇಲ್ಲದ ವಿದೇಶಿ ಪ್ರಜೆಗಳನ್ನು ರಾಜ್ಯದಿಂದ ಹೊರ ಹಾಕಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

Vijaya Karnataka Web 8 Aug 2018, 10:16 am
ಬೆಂಗಳೂರು: ಅಗತ್ಯ ದಾಖಲಾತಿ ಇಲ್ಲದ ವಿದೇಶಿ ಪ್ರಜೆಗಳನ್ನು ರಾಜ್ಯದಿಂದ ಹೊರ ಹಾಕಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
Vijaya Karnataka Web parameshwar


ನಗರದ ಯವನಿಕದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು ''ರಾಜ್ಯದಲ್ಲಿ ಯಾವೊಬ್ಬ ವಿದೇಶಿ ಪ್ರಜೆಯೂ ಅನಧಿಕೃತವಾಗಿ ವಾಸವಿರುವಂತಿಲ್ಲ. ಸೂಕ್ತ ದಾಖಲಾತಿ ಇಲ್ಲದವರಿಗೆ ಇಲ್ಲಿ ನೆಲೆಸಲು ಅವಕಾಶ ಇಲ್ಲ. ಕಳೆದ ವಾರ 107 ವಿದೇಶಿಯರನ್ನು ಪತ್ತೆ ಹಚ್ಚಿ ಗಡಿಪಾರು ಮಾಡಲಾಗಿದೆ. ಬೆಂಗಳೂರಿನಲ್ಲಿ 100 ಆಫ್ರಿಕನ್‌ ಪ್ರಜೆಗಳನ್ನು ಗುರುತಿಸಿದ್ದು, ವಾಪಸ್‌ ಕಳುಹಿಸಲಾಗುವುದು,'' ಎಂದರು.

''ಬಾಂಗ್ಲಾದೇಶಿ ಮೂಲದವರು ವಲಸಿಗರ ರೂಪದಲ್ಲಿ ಅಕ್ರಮವಾಗಿ ವಾಸವಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಸಂಬಂಧಿಸಿದ ಪ್ರಾಧಿಕಾರಕ್ಕೆ ಸೂಕ್ತ ನಿರ್ದೇಶನ ನೀಡಿದ್ದು, ಅದರಂತೆ ಕ್ರಮ ಜರುಗಿಸಲಿದ್ದಾರೆ,'' ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ