ಆ್ಯಪ್ನಗರ

ಗೌರಿ ಲಂಕೇಶ್‌ ಹತ್ಯೆ: ಆರೋಪಿ ಎಸ್‌ಐಟಿ ವಶಕ್ಕೆ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಆರೋಪದಲ್ಲಿಬಂಧಿತನಾಗಿರುವ ಆರೋಪಿ ರಿಷಿಕೇಶ್‌ ದೇವ್ಡೀಕರ್‌ ಅವರನ್ನು ನ್ಯಾಯಾಲಯ 15 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.

Vijaya Karnataka Web 13 Jan 2020, 10:54 pm
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಆರೋಪದಲ್ಲಿಬಂಧಿತನಾಗಿರುವ ಆರೋಪಿ ರಿಷಿಕೇಶ್‌ ದೇವ್ಡೀಕರ್‌ ಅವರನ್ನು ನ್ಯಾಯಾಲಯ 15 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.
Vijaya Karnataka Web ಗೌರಿ ಲಂಕೇಶ್‌
ಗೌರಿ ಲಂಕೇಶ್‌


ಜಾರ್ಖಂಡ್‌ನಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಎಸ್‌ಐಟಿ ಅಧಿಕಾರಿಗಳು ಸೋಮವಾರ ಬೆಳಗ್ಗೆ 'ಕೋಕಾ' ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 15 ದಿನಗಳ ಎಸ್‌ಐಟಿ ವಶಕ್ಕೆ ಒಪ್ಪಿಸಿದೆ.

ಆರೋಪಿ ಗೌರಿ ಹತ್ಯೆಯ ಪ್ರಮುಖ ಆರೋಪಿ ಆಗಿರುವುದಲ್ಲದೆ, ಕೊಲೆಗೆ ಬಳಸಿದ ಅಸ್ತ್ರವನ್ನೂ ನಾಶ ಮಾಡಿರುವ ಆರೋಪ ಹೊತ್ತಿದ್ದಾನೆ . ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳ ಬಂಧನವಾಗಬೇಕಿದ್ದು ಈ ಎಲ್ಲದರ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಈ ಕಾರಣದಿಂದ ಆರೋಪಿಯನ್ನು 15 ದಿನಗಳ ವಶಕ್ಕೆ ನೀಡುವಂತೆ ಸಿಸಿಎಚ್‌ ಒಂದರ ವಿಶೇಷ ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯ ಆರೋಪಿಯನ್ನು ಎಸ್‌ಐಟಿ ವಶಕ್ಕೆ ಒಪ್ಪಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ