ಆ್ಯಪ್ನಗರ

ಗೌರಿ ಲಂಕೇಶ್‌ ಹತ್ಯೆ: ಸುಳಿವು ನೀಡಿದವರಿಗೆ ಹತ್ತು ಲಕ್ಷ

ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹಂತಕರ ಸುಳಿವು ಕೊಟ್ಟವರಿಗೆ ಹತ್ತು ಲಕ್ಷ ರೂ. ಬಹುಮಾನ ನೀಡುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Vijaya Karnataka Web 8 Sep 2017, 12:41 pm
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹಂತಕರ ಸುಳಿವು ಕೊಟ್ಟವರಿಗೆ ಹತ್ತು ಲಕ್ಷ ರೂ. ಬಹುಮಾನ ನೀಡುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Vijaya Karnataka Web gauri lankesh murder govt announce ten lakh
ಗೌರಿ ಲಂಕೇಶ್‌ ಹತ್ಯೆ: ಸುಳಿವು ನೀಡಿದವರಿಗೆ ಹತ್ತು ಲಕ್ಷ


ಸಿಎಂ ಅವರನ್ನು ಭೇಟಿ ಮಾಡಿ ತನಿಖೆ ಬಗ್ಗೆ ವಿವರ ನೀಡಿದ್ದೇನೆ . ಹಿರಿಯ ಅಧಿಕಾರಿಗಳ ವಿವರ ನೀಡಲಾಗಿದೆ. ತನಿಖೆ ಚುರುಕುಗೊಳಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ. ಈಗಾಗಲೇ ಅಧಿಕಾರಿಗಳ ತಂಡ ಕೆಲಸ ಪ್ರಾರಂಭ ಮಾಡಿದೆ. ಕೇಳಿದಷ್ಟು ಅಧಿಕಾರಿಗಳನ್ನು ಈಗಾಗಲೇ ನೀಡಿದ್ದೇವೆ. ಪೊಲೀಸರು ಬೇಕು ಅಂದರೆ ಇಲಾಖೆ ನೀಡುತ್ತದೆ. ಹತ್ಯೆಯ ಕಾರಣ ಏನುಅನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಎಡ ,ಬಲ, ನಕ್ಸಲ್ ಸೇರಿದಂತೆ ಎಲ್ಲಾ ಆಯಾಮದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸಚಿವರು ಹೇಳಿದರು.

ತನಿಖೆ ನಡೆದ ಮೇಲೆ ಎಲ್ಲಾ ಗೊತ್ತಾಗಲಿದೆ. ಹಂತಕರ ಬಗ್ಗೆ ಸುಳಿವು ನೀಡಿದವರಿಗೂ ಬಹುಮಾನ ಘೋಷಣೆ ಮಾಡಲಾಗಿದೆ. ಸಚಿವ ವಿನಯ್ ಕುಲಕರಣಿ ಭದ್ರತೆ ಬೇಕು ಅಂತ ಕೇಳಿದ್ದು ನೀಡಲಾಗಿದೆ. ಜಾಮದಾರ್‌ ಅವರಿಗೂ ಬೆದರಿಕೆ ಬಂದಿದೆ ಅಂತ ಗೊತ್ತಾಗಿದೆ ಅವರಿಗೂ ಭದ್ರತೆ ನೀಡಲಾಗುತ್ತದೆ. ವಿಚಾರವಾದಿಗಳಿಗೆ ಹಾಗೂ ಯಾರಿಗೆ ಬೆದರಿಕೆ ಇದೆಯೋ ಅವರೆಲ್ಲರಿಗೂ ಸರಕಾರ ಭದ್ರತೆ ನೀಡುತ್ತದೆ. ಬಿಜೆಪಿ ಶಾಸಕ ಜೀವರಾಜ್ ವಿವಾದಾತ್ಮಕ ಹೇಳಿಕೆ ವಿಚಾರ‌ಕ್ಕೆ ಸಂಬಂಧಿಸಿದಂತೆ ಅವರನ್ನು ವಿಚಾರಣೆ ಮಾಡುವಂತೆ ಎಸ್ ಐಟಿಗೆ ಸೂಚನೆ ನೀಡಲಾಗಿದೆ. ಈ ಹೇಳಿಕೆ ಹಿಂದಿನ ಮರ್ಮವೇನು? ಯಾಕೆ ಹೇಳಿಕೆ ನೀಡಿದರು ಅನ್ನುವುದನ್ನು ವಿಚಾರಿಸಲು ಸೂಚಿಸಲಾಗಿದೆ. ಎಸ್ ಐಟಿ‌ ತನಿಖೆ ಬಳಿಕ ಹೇಳಿಕೆ ಬಗ್ಗೆ ಮತ್ತಷ್ಟು ಸ್ಪಷ್ಟತೆ ಸಿಗುತ್ತದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ