ಆ್ಯಪ್ನಗರ

ರಾಜ್ಯದಲ್ಲಿ ಗೋಸಂರಕ್ಷಣೆಗೆ ಸಿಗುತ್ತಿದೆಯಾ ಒತ್ತು? ಗೋಶಾಲೆಗಳಿಗೆ ಸರ್ಕಾರ ಕೊಟ್ಟ ಅನುದಾನವೆಷ್ಟು?

ರಾಜ್ಯದಲ್ಲಿ ಗೋಸಂರಕ್ಷಣೆಗೆ ಸಿಗುತ್ತಿದೆಯಾ ಒತ್ತು? ಅಷ್ಟಕ್ಕೂ ಗೋಶಾಲೆಗಳಿಗೆ ರಾಜ್ಯ ಸರ್ಕಾರ ಕೊಟ್ಟ ಅನುದಾನವೆಷ್ಟು? ಎಷ್ಟು ಗೋಶಾಲೆಗಳಿಗೆ ಅನುದಾನಕ್ಕಾಗಿ ಬೇಡಿಕೆಗಳು ಬಂದಿವೆ? ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 26 Sep 2021, 10:17 am

ಹೈಲೈಟ್ಸ್‌:

  • ರಾಜ್ಯದಲ್ಲಿ ಗೋಸಂರಕ್ಷಣೆಗೆ ಸಿಗುತ್ತಿದೆಯಾ ಒತ್ತು?
  • ಗೋಶಾಲೆಗಳಿಗೆ ಸರ್ಕಾರ ಕೊಟ್ಟ ಅನುದಾನವೆಷ್ಟು?
  • ಇಲ್ಲಿದೆ ಈ ಕುರಿತಾದ ಸಂಪೂರ್ಣ ಮಾಹಿತಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web cow
ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಂಡ ಹಿನ್ನೆಲೆಯಲ್ಲಿ ಗೋಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳು ಬರುತ್ತಿದ್ದು ಇದರ ಸಂರಕ್ಷಣೆ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಗೋವುಗಳ ಸಂರಕ್ಷಣೆಗಾಗಿ ಅನುದಾನ ಬಿಡುಗಡೆಗೆ ಬೇಡಿಕೆಗಳು ಗೋಶಾಲೆಗಳಿಂದ ಬರುತ್ತಿದ್ದು ಕಳೆದ ಒಂದು ವರ್ಷದಲ್ಲಿ 1.85 ಕೋಟಿ ಅನುದಾನವನ್ನು ನೀಡಲಾಗಿದೆ.
ರಾಜ್ಯದಲ್ಲಿ ಅಧಿಕೃತವಾಗಿ 199 ಗೋಶಾಲೆಗಳಿಗೆ. ಈ ಪೈಕಿ 2021-22 ನೇ ಸಾಲಿನಲ್ಲಿ ಒಟ್ಟು 133 ಗೋಶಾಲೆಗಳಿಂದ ಅನುದಾನಕ್ಕಾಗಿ ಪ್ರಸ್ತಾವನೆ ಬಂದಿದೆ. ಪ್ರಸ್ತಾವಣೆ ಸಲ್ಲಿಸಿರುವ ಎಲ್ಲ 133 ಗೋಶಾಲೆಗಳಿಗೆ ರಾಜ್ಯ ಸರ್ಕಾರ 1,85,81,887 ಅನುದಾನವನ್ನು ಬಿಡುಗಡೆಗೊಳಿಸಿದೆ.

ಈ ಪೈಕಿ ಪ್ರಮುಖವಾಗಿ ಬೆಳಗಾವಿಯ ಡಾ. ಶಿವಾನಂದ ಭಾರತಿ ಸ್ವಾಮೀಜಿಗಳ ಶಿವಯೋಗೀಶ್ವರ ಗೋಶಾಲೆಗೆ 1,21,072 ಹಾಗೂ ಸೋಮೇಶ್ವರ ಕಾಮದೇನು ಗೋಸೇವಾ ಸಂಸ್ಥೆಗೆ 1,14,586 ಲಕ್ಷ ಅನುದಾನ ನೀಡಲಾಗಿದೆ. ಅಲ್ಲದೆ ಉತ್ತರ ಕನ್ನಡ ಜಿಲ್ಲೆಯ ಅಮೃತದಾರ ಗೋಶಾಲೆಗೆ 2,16,200, ಅಮೃತದಾರ ( ಗೋಸ್ವರ್ಗ) ಗೋಶಾಲೆ ಸಿದ್ದಾಪುರ - 2,16,200 ಸೇರಿದಂತೆ ಅದೇ ಜಿಲ್ಲೆಯ ಇತರ ಗೋಶಾಲೆಗಳಿಗೂ ನೆರವು ಒದಗಿಸಲಾಗಿದೆ.

ಸರ್ಕಾರಿ ನಿವಾಸ ಬಿಟ್ಟು ಕೊಡದ ಮಾಜಿಗಳು! ವಸತಿ ಗೃಹ ಗಿಟ್ಟಿಸಿಕೊಳ್ಳಲು ಬೊಮ್ಮಾಯಿ ಬೆನ್ನ ಹಿಂದೆ ಬಿದ್ದ ನೂತನ ಸಚಿವರು

ದಕ್ಷಿಣ ಕನ್ನಡ ಜಿಲ್ಲೆಯ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಗೋಶಾಲೆಗೆ 2,16,200, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾಮದೇನು ಗೋ ಶಾಲೆ -1,79,446 ಸೇರಿದಂತೆ ಒಟ್ಟು 12 ಗೋಶಾಲೆಗಳಿಗೆ ಅನುದಾನ ನೀಡಲಾಗಿದೆ. ಅದೇ ರೀತಿಯಲ್ಲಿ ಉಡುಪಿಯ ಗೋವರ್ಧನ ಗಿರಿ ಪೇಜಾವರ ಅದೋಕ್ಷಜ ಮಠದ ಗೋಶಾಲೆಗೂ 2,16,200 ಅನುದಾನ ನೀಡಲಾಗಿದೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೆ ತಂದಿದೆ. ವಿಧಾನಮಂಡಲದಲ್ಲಿ ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಾಯ್ದೆ ಪ್ರಕಾರ ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಆ ಜಿಲ್ಲೆ ಅಥವಾ ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲು ಸೂಚಿಸಲಾಗಿದೆ.

ಅಷ್ಟೇ ಅಲ್ಲದೆ, ಹಸುಗಳನ್ನು ಕೃಷಿ, ಪಶುಸಂಗೋಪನೆ ಉದ್ದೇಶಕ್ಕಾಗಿ ಸಾಗಣೆ ಮಾಡುವವರು ಸಾರಿಗೆ ದೃಢೀಕರಣ ಪತ್ರ, ಮಾಲೀಕತ್ವ ದಾಖಲೆ ಹಾಗೂ ಪಶು ಪ್ರಥಮ ಚಿಕಿತ್ಸಾ ಪರಿಕರಗಳನ್ನು ಹೊಂದಿರಬೇಕು. 15 ಕಿ.ಮೀ. ವ್ಯಾಪ್ತಿಯೊಳಗೆ ಎರಡು ಹಸು ಅಥವಾ ಅವುಗಳ ಕರುಗಳನ್ನು ಸಾಗಣೆ ಮಾಡಲು ಯಾವುದೇ ಸಾರಿಗೆ ದಾಖಲಾತಿಯ ಅಗತ್ಯ ಇಲ್ಲ ಎಂದು ತಿಳಿಸಲಾಗಿದೆ.

ಹಸು ಸಾಗಣೆ ಮಾಡುವ ಪ್ರತಿ ಸರಕು ಸಾಗಣೆ ವಾಹನದ ಮೇಲೆ ಕೆಂಪು ಬಣ್ಣದ ದಪ್ಪ ಅಕ್ಷರದಲ್ಲಿ ರವಾನಿಸುವವರು, ಸ್ವೀಕರಿಸುವವರ ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಬರೆದಿರಬೇಕು. ಜೊತೆಗೆ ಸಾಗಣೆ ಮಾಡುತ್ತಿರುವ ಹಸುಗಳ‌ ಸಂಖ್ಯೆ, ತಳಿ ಹಾಗೂ ಪೂರೈಸಲಾದ ಆಹಾರ ಪ್ರಮಾಣವನ್ನು ಬರೆದಿರಬೇಕು.

ಸಾಗಣೆ ಮಾಡುವ ಹಸುಗಳಿಗೆ ಯಥೇಚ್ಛವಾಗಿ ಹುಲ್ಲು ತಿನ್ನಿಸಿ, ನೀರು ಕುಡಿಸಿರಬೇಕು. ಯಥೇಚ್ಛ ಆಹಾರ, ಹುಲ್ಲು, ನೀರನ್ನು ಸಂಗ್ರಹಿಸಿರಬೇಕು. ಆರು ತಿಂಗಳ ಗರ್ಭಿಣಿ ಹಸುವನ್ನು ಸಾಗಣೆ ಮಾಡುವ ಹಾಗಿಲ್ಲ. ಆದರೆ, ಚಿಕಿತ್ಸೆ ಉದ್ದೇಶಕ್ಕಾಗಿ ಗರ್ಭಿಣಿ ಹಸುವನ್ನು ಸಾಗಣೆ ಮಾಡಬಹುದಾಗಿದೆ ಎಂದಿದೆ.

ಒಟ್ಟಿನಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಂಡ ಬಳಿಕ ಗೋವುಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ಅವುಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕಾಗುತ್ತದೆ. ಆದರೆ ಸೂಕ್ತ ಅನುದಾನ ಸಿಗುತ್ತಿಲ್ಲ ಎಂಬ ಆರೋಪಗಳು ಕೂಡಾ ಕೇಳಿಬಂದಿದ್ದವು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ