ಬೆಂಗಳೂರು :ಚಿಕ್ಕಬಳ್ಳಾಪುರದ ಬಾಲ ಮಂದಿರದಲ್ಲಿ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಪ್ರಕರಣವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿಗೌಡ ಹೇಳಿದರು.
'' ಈ ಪ್ರಕರಣ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ತಳೆದಿದ್ದಾರೆ. ಇಲಾಖೆ ಕೆಲಸ ಬಿಟ್ಟು ಚುನಾವಣಾ ಕಾರ್ಯದಲ್ಲಿ ಮುಳುಗಿ ಹೋಗಿದ್ದಾರೆ,'' ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.
''ಬಾಲ ಮಂದಿರದಲ್ಲಿ ನಡೆಯುವ ಇಂಥ ಕೃತ್ಯಗಳಿಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಬಾಲ ಮಂದಿರಗಳ ಬಗ್ಗೆ ಆಡಿಟ್ ವರದಿ ಸಲ್ಲಿಸುವಂತೆ ಕೇಂದ್ರ ಸಚಿವೆ ಮನೇಕಾ ಗಾಂಧಿ ಎಲ್ಲ ರಾಜ್ಯಗಳಿಂದ ವರದಿ ಕೇಳಿದ್ದರು. ಆದರೆ, ರಾಜ್ಯ ಸರಕಾರ ಇದುವರೆಗೆ ವರದಿ ನೀಡಿಲ್ಲ ,''ಎಂದು ತೇಜಸ್ವಿನಿ ಆರೋಪಿಸಿದರು.
'' ಈ ಪ್ರಕರಣ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ತಳೆದಿದ್ದಾರೆ. ಇಲಾಖೆ ಕೆಲಸ ಬಿಟ್ಟು ಚುನಾವಣಾ ಕಾರ್ಯದಲ್ಲಿ ಮುಳುಗಿ ಹೋಗಿದ್ದಾರೆ,'' ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.
''ಬಾಲ ಮಂದಿರದಲ್ಲಿ ನಡೆಯುವ ಇಂಥ ಕೃತ್ಯಗಳಿಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಬಾಲ ಮಂದಿರಗಳ ಬಗ್ಗೆ ಆಡಿಟ್ ವರದಿ ಸಲ್ಲಿಸುವಂತೆ ಕೇಂದ್ರ ಸಚಿವೆ ಮನೇಕಾ ಗಾಂಧಿ ಎಲ್ಲ ರಾಜ್ಯಗಳಿಂದ ವರದಿ ಕೇಳಿದ್ದರು. ಆದರೆ, ರಾಜ್ಯ ಸರಕಾರ ಇದುವರೆಗೆ ವರದಿ ನೀಡಿಲ್ಲ ,''ಎಂದು ತೇಜಸ್ವಿನಿ ಆರೋಪಿಸಿದರು.