ಆ್ಯಪ್ನಗರ

ಮಹದಾಯಿ ಯೋಜನೆಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಎನ್‌ಜಿಟಿ ಮೊರೆ ಹೋದ ಗೋವಾ ಪಕ್ಷ

​"ಮಹದಾಯಿ ಯೋಜನೆಗೆ ಗೋವಾ ರಾಜ್ಯದ ವಿರೋಧವಿದ್ದರೂ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ದೃಷ್ಟಿಯಿಂದ ಕೇಂದ್ರ ಸರಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ," ಎಂದು ಗೋವಾ ಫಾರ್ವರ್ಡ್‌ ಪಾರ್ಟಿ ದೂರಿನಲ್ಲಿ ತಿಳಿಸಿದೆ.

Vijaya Karnataka 4 Nov 2019, 8:48 pm
ಹೊಸದಿಲ್ಲಿ: ಮಹದಾಯಿ ಮತ್ತು ಕಳಸಾ ಬಂಡೂರಿ ನಾಲೆ ತಿರುವು ಯೋಜನೆಗೆ ಪರಿಸರ ಇಲಾಖೆ ನೀಡಿದ್ದ ಅನುಮತಿಯನ್ನು ಗೋವಾದ ಪಕ್ಷವನ್ನು ಪ್ರಶ್ನಿಸಿದೆ. ಈ ಸಂಬಂಧ ತಕರಾರು ಎತ್ತಿರುವ ಗೋವಾ ಫಾರ್ವರ್ಡ್‌ ಪಾರ್ಟಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಮೊರೆ ಹೋಗಿದೆ.
Vijaya Karnataka Web Mahadayi


"ಮಹದಾಯಿ ಯೋಜನೆಗೆ ಗೋವಾ ರಾಜ್ಯದ ವಿರೋಧವಿದ್ದರೂ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ದೃಷ್ಟಿಯಿಂದ ಕೇಂದ್ರ ಸರಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಪರಿಸರ ಇಲಾಖೆ ನೀಡಿರುವ ಅನುಮತಿಯನ್ನು ರದ್ದು ಮಾಡಬೇಕು," ಎಂದು ಒತ್ತಾಯಿಸಿ ಗೋವಾ ಫಾರ್ವರ್ಡ್‌ ಪಾರ್ಟಿ ಕೇಂದ್ರ ಹಸಿರು ನ್ಯಾಯಾಧೀಕರಣಕ್ಕೆ ಸೋಮವಾರ ದೂರು ಸಲ್ಲಿಸಿದೆ.

ಪರಿಸರಕ್ಕೆ ಹಾನಿಯುಂಟು ಮಾಡಬಹುದಾದ ಈ ಯೋಜನೆಯನ್ನು ವಿರೋಧಿಸಿ ಗೋವಾ ರಾಜ್ಯವು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದೆ. ಈ ಹೋರಾಟ ಲೆಕ್ಕಿಸದೇ, ಕರ್ನಾಟಕದ ಪರವಾಗಿ ಕೇಂದ್ರ ಸರಕಾರ ಒಲವು ತೋರುತ್ತಿದೆ ಎಂದು ಪಕ್ಷದ ಅಧ್ಯಕ್ಷ ವಿಜಯ ಸರದೇಸಾಯಿ ನ್ಯಾಯಾಧಿಕರಣಕ್ಕೆ ನೀಡಿದ ದೂರಿನಲ್ಲಿಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ