ಆ್ಯಪ್ನಗರ

ದೇವರು ಕೊಟ್ಟ ನನ್ನ ಅಧಿಕಾರ ಸುಲಭವಾಗಿ ಹೋಗುವುದಿಲ್ಲ: ಸಿಎಂ ಕುಮಾರಸ್ವಾಮಿ

'ನನಗೆ ದೇವರು ಕೊಟ್ಟ ಅಧಿಕಾರ ಅಷ್ಟು ಸುಲಭವಾಗಿ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಶಾಭಾವನೆ ವ್ಯಕ್ತಪಡಿಸಿದರು.

Vijaya Karnataka 26 Jun 2018, 10:40 am
ಬೆಂಗಳೂರು: 'ನನಗೆ ದೇವರು ಕೊಟ್ಟ ಅಧಿಕಾರ ಅಷ್ಟು ಸುಲಭವಾಗಿ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಶಾಭಾವನೆ ವ್ಯಕ್ತಪಡಿಸಿದರು.
Vijaya Karnataka Web hdk


ನಗರದ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 'ಕಾಸಿಯಾ ಶ್ರೇಷ್ಠತೆ ಮತ್ತು ನಾವೀನ್ಯತೆ ಕೇಂದ್ರ' ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ ಅವರು, ''ದೇವರು ನನ್ನಿಂದ ಏನನ್ನೋ ಮಾಡಿಸಲು ಅಧಿಕಾರ ಕೊಟ್ಟಿದ್ದಾನೆ. ಹಾಗಾಗಿ ಅಧಿಕಾರದಲ್ಲಿ ಇರುವವರೆಗೆ ಒಳ್ಳೆಯ ಕೆಲಸ ಮಾಡುವುದರತ್ತ ಮಾತ್ರ ನನ್ನ ಗಮನ,'' ಎಂದು ಹೇಳಿದರು.

''ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು ಎಂಬುದು ರಾಜ್ಯದ ಜನರ ಬಯಕೆಯಾಗಿತ್ತು. ನಾನು ಹೋದೆಡೆಗಳಲ್ಲೆಲ್ಲಾ ಮುಂದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಂದು ಜನರು ಘೋಷಣೆಗಳನ್ನು ಕೂಗುತ್ತಿದ್ದ ಜನರು, ಮತಗಳನ್ನು ನೀಡಲು ಮರೆತರು. ಅವರ ಮನದಾಳದ ಆಶಯದಂತೆ ಭಗವಂತ ಮುಖ್ಯಮಂತ್ರಿಯಾಗುವ ಅವಕಾಶವನ್ನು ನೀಡಿದ. ಆದರೆ ಸಂಪೂರ್ಣ ಸರಕಾರ ರಚನೆಗೆ ಅವಕಾಶ ನೀಡಲಿಲ್ಲ. ಹಾಗಾಗಿ ನಾನು ಅದೃಷ್ಟವಂತ ರಾಜಕಾರಣಿ,'' ಎಂದು ಪುನರುಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ