ಆ್ಯಪ್ನಗರ

ರಾಜ್ಯದಲ್ಲಿ ಹಲವು ವರ್ಷಗಳ ನಂತರ ಉತ್ತಮ ಮಳೆ: ಶೇ.104ರಷ್ಟು ಬಿತ್ತನೆ

ರಾಜ್ಯದಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚಿನ ಮಳೆಯಾಗಿದೆ. ಅದರಂತೆ ಈ ಬಾರಿ ರಾಜ್ಯಾದ್ಯಂತ ಶೇ.104ರಷ್ಟು ಬಿತ್ತನೆ ಕಾರ್ಯ ನಡೆದಿದೆ. ಹಲವು ವರ್ಷಗಳ ನಂತರ ರಾಜ್ಯದಲ್ಲಿ ಕೃಷಿ ರಂಗದಲ್ಲಿ ಉತ್ತಮವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ತಿಳಿಸಿದ್ದಾರೆ.

Vijaya Karnataka Web 18 Sep 2020, 11:41 pm
ಚಿಂತಾಮಣಿ: ರಾಜ್ಯದಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚಿನ ಮಳೆಯಾಗಿದೆ. ಅದರಂತೆ ಈ ಬಾರಿ ರಾಜ್ಯಾದ್ಯಂತ ಶೇ.104ರಷ್ಟು ಬಿತ್ತನೆ ಕಾರ್ಯ ನಡೆದಿದೆ. ಹಲವು ವರ್ಷಗಳ ನಂತರ ರಾಜ್ಯದಲ್ಲಿ ಕೃಷಿ ರಂಗದಲ್ಲಿ ಉತ್ತಮವಾಗಿದೆ. 2007ರಲ್ಲಿ ರಾಜ್ಯದಲ್ಲಿ ಶೇ.98 ಬಿತ್ತನೆಯಾಗಿತ್ತು. ತದನಂತರ ರಾಜ್ಯದಲ್ಲಿ ಈ ವರ್ಷವೇ ಅತ್ಯುತ್ತಮವಾದ ಬಿತ್ತನೆ ಕಾರ್ಯ ನಡೆದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ತಿಳಿಸಿದ್ದಾರೆ.
Vijaya Karnataka Web bc patil


ತಾಲೂಕಿನ ಕುರುಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮತ್ತು ರೇಷ್ಮೆ ಕೃಷಿ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ರೈತರೊಂದಿಗೆ ಸಂವಾದ, ನೂತನ ಕ್ರೀಡಾಂಗಣ ಮತ್ತು ಚಂದ್ರಕಳಶ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

''ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿವೆ. ಈ ಸಂದರ್ಭದಲ್ಲಿ ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಹಿಂದಿಗಿಂತ ಈಗ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗಿದೆ. ಆ ನಿಟ್ಟಿನಲ್ಲಿ ಇದುವರೆಗೆ 7.51 ಲಕ್ಷ ಮೆಟ್ರಿಕ್‌ ಟನ್‌ ಗೊಬ್ಬರ ವಿತರಣೆ ಮಾಡಿದ್ದೇವೆ. ಈವರೆಗೆ 1.85 ಸಾವಿರ ಹೆಚ್ಚುವರಿ ಮೆಟ್ರಿಕ್‌ ಟನ್‌ ವಿತರಿಸಿದ್ದೇವೆ. ಇನ್ನು ಒಂದು ಲಕ್ಷ ಮೆಟ್ರಿಕ್‌ ಟನ್‌ ಗೊಬ್ಬರ ವಿತರಿಸಲಿದ್ದೇವೆ,'' ಎಂದು ತಿಳಿಸಿದರು.

ತಪ್ಪು ಮಾಹಿತಿ ನಂಬಿ ಮೋಸ ಹೋಗಬೇಡಿ: ರೈತರಿಗೆ ಪ್ರಧಾನಿ ಮೋದಿ ಮನವಿ

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ರದ್ದು:
ಈ ಬಾರಿಯ ಕೃಷಿ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ಈ ಕುರಿತು ವಿದ್ಯಾರ್ಥಿಗಳ ಪೋಷಕರಲ್ಲಿ ವಿನಾಕಾರಣ ಗೊಂದಲಗಳು ಉಂಟಾಗಿವೆ. ಗೊಂದಲಗಳು ಬೇಡ. ವಿವಿಯಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವೇ ಇಲ್ಲ. ಈ ಸ್ಥಾನಗಳಿಗೆ ವಿದ್ಯಾರ್ಥಿಗಳನ್ನು ತುಂಬಿಕೊಳ್ಳಲು ಮುಖ್ಯಮಂತ್ರಿಗಳ ಶಿಫಾರಸಿಗೂ ಮಣಿಯುವುದಿಲ್ಲ. ಮೆರಿಟ್‌ ಆಧಾರದಲ್ಲಿಯೇ ತುಂಬಿಕೊಳ್ಳಲಾಗುವುದು. ಈ ಕುರಿತು ಯಾವುದೇ ಗೊಂದಲ ಬೇಡ ಎಂದು ಬಿ.ಸಿ.ಪಾಟೀಲ್‌ ತಿಳಿಸಿದರು.

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹರ್ಸಿಮ್ರತ್ ಬಾದಲ್!

ಎಂಟಿಬಿ ನಾಗರಾಜ್‌ಗೆ ಸಚಿವ ಸ್ಥಾನ ಸಿಗಬೇಕು
ಎಂಟಿಬಿ ನಾಗರಾಜ್‌ ಮತ್ತು ಆರ್‌.ಶಂಕರ್‌ ಅವರು ಇಂದಿನ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವರು. ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ಕೊಟ್ಟು ಅವರು ಬಿಜೆಪಿಗಾಗಿ ತ್ಯಾಗ ಮಾಡಿದ್ದಾರೆ. ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡಲೇಬೇಕು. ಆ ನಿಟ್ಟಿನಲ್ಲಿ ಅವರನ್ನು ವಿಧಾನ ಪರಿಷತ್‌ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಅವರು ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು.

ಗೊಬ್ಬರದಲ್ಲಿ ಮೋಸ ಮಾಡಿದರೆ ಕ್ರಿಮಿನಲ್‌ ಕೇಸ್‌
ರಾಜ್ಯದಲ್ಲಿ ಗೊಬ್ಬರಕ್ಕೆ ಕೊರತೆ ಇಲ್ಲ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕೆ ಗೊಬ್ಬರ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸುವುದು ಮತ್ತು ಹೆಚ್ಚಿನ ಬೆಲೆಗೆ ಗೊಬ್ಬರವನ್ನು ಮಾರಾಟ ಮಾಡುವುದನ್ನು ಸಹಿಸುವುದಿಲ್ಲ. ಆ ರಸಗೊಬ್ಬರ ಮಾರಾಟಗಾರರ ಲೈಸೆನ್ಸ್‌ ರದ್ದು ಮಾಡಲಾಗುವುದು ಮತ್ತು ಅವರ ಮೇಲೆ ಕ್ರಿಮಿನಲ್‌ ಕೇಸ್‌ ಹಾಕಲಾಗುವುದು. ಈಗಾಗಲೇ 117 ಮಳಿಗೆಗಳ ಲೈಸೆನ್ಸ್‌ ರದ್ದು ಮಾಡಲಾಗಿದೆ ಎಂದು ಬಿ.ಸಿ.ಪಾಟೀಲ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ