ಆ್ಯಪ್ನಗರ

ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ, ಖಜಾಂಚಿ ಸ್ಥಾನಕ್ಕೆ ಆ.7ರಂದು ಚುನಾವಣೆ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಖಜಾಂಚಿ ಹುದ್ದೆಗಳಿಗೆ ಆ...

Vijaya Karnataka 26 Jul 2019, 5:00 am
ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಖಜಾಂಚಿ ಹುದ್ದೆಗಳಿಗೆ ಆ.7ರಂದು ಚುನಾವಣೆ ನಡೆಯಲಿದೆ ಎಂದು ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷ ಕೆ.ಜಿ. ಜಗದೀಶ್‌ ತಿಳಿಸಿದರು.
Vijaya Karnataka Web goverment employee union election
ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ, ಖಜಾಂಚಿ ಸ್ಥಾನಕ್ಕೆ ಆ.7ರಂದು ಚುನಾವಣೆ


''ಸಂಘಕ್ಕೆ 2019ರಿಂದ 2024ರ ಅವಧಿಧಿಯ ಚುನಾವಣೆಗಳು ಮೇ 27ರಿಂದ ಪ್ರಾರಂಭವಾಗಿ ಈವರೆಗೂ 3 ಹಂತಗಳಲ್ಲಿ ನಡೆದಿದೆ. ಆ.7ರಂದು ರಾಜ್ಯಾಧ್ಯಕ್ಷ ಮತ್ತು ಖಜಾಂಚಿ ಹುದ್ದೆಗಳಿಗೆ ಚುನಾವಣೆ ನಡೆಯುತ್ತಿದ್ದು, 551 ಮತದಾರರು ಭಾಗವಹಿಸಲಿದ್ದಾರೆ'' ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು

''ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಹಾಗೂ ಖಜಾಂಚಿ ಹುದ್ದೆಗೆ ಕೊಪ್ಪಳ ಜಿಲ್ಲಾಧ್ಯಕ್ಷ ನಾಗರಾಜ್‌ ಜುಮ್ಮನ್ನವರ ಮತ್ತು ರಾಯಚೂರು ಜಿಲ್ಲಾಧ್ಯಕ್ಷ ಮೆಹಬೂಬ್‌ ಪಾಷ ಉಮೇದುವಾರಿಕೆ ಹಿಂಪಡೆದಿದ್ದು, ಸಂಘದ ಹಾಲಿ ರಾಜ್ಯಾಧ್ಯಕ್ಷ ಎಚ್‌.ಕೆ. ರಾಮು ರಾಜ್ಯಾಧ್ಯಕ್ಷ ಸ್ಥಾನಕ್ಕೆ, ಖಜಾಂಚಿ ಸ್ಥಾನಕ್ಕೆ ಡಾ. ಎಸ್‌.ಸಿದ್ಧರಾಮಣ್ಣ ಸ್ಪರ್ಧಿಸಲಿ,'' ಎಂದು ಜಗದೀಶ್‌ ಮನವಿ ಮಾಡಿದರು.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಚ್‌.ಕೆ.ರಾಮು ಮಾತನಾಡಿ, ''ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ನೌಕರರ ಹೋರಾಟ ಸಂಘಟಿಸಲಾಗುವುದು,'' ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ