ಆ್ಯಪ್ನಗರ

ವೈದ್ಯ ಸೀಟು ಹೆಚ್ಚಳಕ್ಕೆ ಎಂಸಿಐಗೆ ಪತ್ರ: ಸರಕಾರದ ಹೇಳಿಕೆ

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ.10ರಷ್ಟು ಮೀಸಲು ಯೋಜನೆಯಡಿ ರಾಜ್ಯ ಸರಕಾರಿ ವೈದ್ಯ ಕಾಲೇಜು ಮತ್ತು ಸಂಸ್ಥೆಗಳಲ್ಲಿ ವೈದ್ಯಕೀಯ ಸೀಟು ಹೆಚ್ಚಳ ಮಾಡುವಂತೆ ಕೋರಿ ಭಾರತೀಯ ವೈದ್ಯಕೀಯ ಮಂಡಳಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯ ಸರಕಾರವು ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ.

Vijaya Karnataka 14 Aug 2019, 5:00 am
ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ.10ರಷ್ಟು ಮೀಸಲು ಯೋಜನೆಯಡಿ ರಾಜ್ಯ ಸರಕಾರಿ ವೈದ್ಯ ಕಾಲೇಜು ಮತ್ತು ಸಂಸ್ಥೆಗಳಲ್ಲಿ ವೈದ್ಯಕೀಯ ಸೀಟು ಹೆಚ್ಚಳ ಮಾಡುವಂತೆ ಕೋರಿ ಭಾರತೀಯ ವೈದ್ಯಕೀಯ ಮಂಡಳಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯ ಸರಕಾರವು ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ.
Vijaya Karnataka Web govt has written letter to mci
ವೈದ್ಯ ಸೀಟು ಹೆಚ್ಚಳಕ್ಕೆ ಎಂಸಿಐಗೆ ಪತ್ರ: ಸರಕಾರದ ಹೇಳಿಕೆ


ಪದ್ಮನಾಭನಗರದ ಅರ್ಜುನ್‌ ರೆಡ್ಡಿ ಎಂಬ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಲ್‌.ನಾರಾಯಣ ಸ್ವಾಮಿ ಮತ್ತು ನ್ಯಾ.ಆರ್‌.ದೇವದಾಸ್‌ ಅವರಿದ್ದ ವಿಭಾಗೀಯಪೀಠಕ್ಕೆ ಹೆಚ್ಚುವರಿ ಸರಕಾರಿ ವಕೀಲ ಲಕ್ಷ್ಮೇನಾರಾಯಣ ಈ ಮಾಹಿತಿ ನೀಡಿದರು.

ಸರಕಾರಿ ವಕೀಲರು, ಆರ್ಥಿಕವಾಗಿ ಹಿಂದುಳಿದ ವರ್ಗದ ಶೇ.10ರಷ್ಟು ಮೀಸಲು ಯೋಜನೆಯಡಿ ವೈದ್ಯ ಸೀಟು ಹೆಚ್ಚಳಕ್ಕೆ ಎಂಸಿಐ ಕೋರಲು ನಿರ್ಧರಿಸಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಎಂಸಿಐನ ಬೋರ್ಡ್‌ ಆಫ್‌ ಗವರ್ನರ್ಸ್‌ ಗೆ 2019 ಜೂ 14ರಂದು ಪತ್ರ ಬರೆಯಲಾಗಿದೆ ಎಂದರು.

ಸರಕಾರಿ ವಕೀಲರ ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಪ್ರಸಕ್ತ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗಿದೆ. ಹೀಗಾಗಿ, ಪ್ರಸ್ತಕ ವರ್ಷದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ ಮೀಸಲು ಯೋಜನೆಯಡಿ ಸರಕಾರಿ ಕಾಲೇಜು ಮತ್ತು ಸಂಸ್ಥೆಗಳಲ್ಲಿ ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲು ಅವಕಾಶವಿಲ್ಲ. ಸೀಟು ಹೆಚ್ಚಳ ಬಗ್ಗೆ ಸರಕಾರ ನ್ಯಾಯಾಲಯಕ್ಕೆ ಭರವಸೆ ನೀಡಿದೆ. ಆದ್ದರಿಂದ ಅರ್ಜಿ ಇತ್ಯರ್ಥಪಡಿಸಲಾಗುವುದು ಎಂದು ಹೇಳಿ ಅರ್ಜಿಯನ್ನು ವಿಲೇವಾರಿ ಮಾಡಿದೆ.

2018-19ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಸರಕಾರಿ ವೈದ್ಯ ಕಾಲೇಜು ಮತ್ತು ಸಂಸ್ಥಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ ಶೇ.10ರಷ್ಟು ಮೀಸಲು ಯೋಜನೆಯಡಿ ವೈದ್ಯ ಸೀಟು ಹೆಚ್ಚಳ ಮಾಡುವಂತೆ ಎಂಸಿಐಗೆ ಪ್ರಸ್ತಾವ ಸಲ್ಲಿಸಲು ಸರಕಾರಕ್ಕೆ ನಿರ್ದೇಶನ ನೀಡÜಬೇಕು ಎಂದು ಅರ್ಜಿದಾರರು ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ