ಆ್ಯಪ್ನಗರ

ಶಿಕ್ಷಕರ ಪಗಾರ ಬಿಡುಗಡೆಗೆ ಸರಕಾರ ಕ್ರಮ

ಎರಡು ತಿಂಗಳಿಂದ ಸಂಬಳವಿಲ್ಲದೆ ಪರಿತಪಿಸುತ್ತಿದ್ದ ಸರ್ವ ಶಿಕ್ಷಣ ಅಭಿಯಾನ (ಎಸ್‌ಎಸ್‌ಎ) ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್‌ಎಂಎಸ್‌ಎ) ಶಿಕ್ಷಕರಿಗೆ ವೇತನ ಬಿಡುಗಡೆ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

Vijaya Karnataka 4 May 2019, 5:00 am
ಬೆಂಗಳೂರು : ಎರಡು ತಿಂಗಳಿಂದ ಸಂಬಳವಿಲ್ಲದೆ ಪರಿತಪಿಸುತ್ತಿದ್ದ ಸರ್ವ ಶಿಕ್ಷಣ ಅಭಿಯಾನ (ಎಸ್‌ಎಸ್‌ಎ) ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್‌ಎಂಎಸ್‌ಎ) ಶಿಕ್ಷಕರಿಗೆ ವೇತನ ಬಿಡುಗಡೆ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
Vijaya Karnataka Web govt will release teachers salary says umashankar
ಶಿಕ್ಷಕರ ಪಗಾರ ಬಿಡುಗಡೆಗೆ ಸರಕಾರ ಕ್ರಮ


ಆರ್ಥಿಕ ಇಲಾಖೆಯಿಂದ ಅನುಮೋದನೆಗೊಂಡ ಕಡತವನ್ನು ಪರಿಶೀಲಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌, ಕೇಂದ್ರದ ಅನುದಾನ ನಿರೀಕ್ಷಿಸಿ 353 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ.

ಅಲ್ಲದೆ, ತಾಲೂಕು ಹಾಗೂ ಜಿಲ್ಲಾವಾರು ಬಜೆಟ್‌ ಬಿಡುಗಡೆಗೊಳಿಸಲು ಖಜಾನೆಗೆ ಅಪ್‌ಲೋಡ್‌ ಮಾಡಲು ಕ್ರಮ ವಹಿಸುವಂತೆ ಪ್ರಧಾನ ಕಾರ್ಯದರ್ಶಿಗಳು ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಇಲಾಖೆಯ ಈ ಕ್ರಮವನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ನಾರಾಯಣಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಸ್ವಾಗತಿಸಿದ್ದಾರೆ. ಮಾರ್ಚ್‌, ಏಪ್ರಿಲ್‌, ಮೇ ಹಾಗೂ ಜೂನ್‌ ತಿಂಗಳ ವೇತನದ ಬಜೆಟ್‌ಗೆ ಅನುಮೋದನೆ ದೊರೆತಿದ್ದು, ಶಿಕ್ಷಕರಿಗೆ ಇನ್ನೊಂದು ವಾರದಲ್ಲಿ ಬಾಕಿ ವೇತನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

'ಎಜುಕೇರ್‌' ವಿಕ ಅಭಿಯಾನದ ಅಂಗವಾಗಿ 'ಪಗಾರವಿಲ್ಲದೆ 21 ಸಾವಿರ ಶಿಕ್ಷಕರ ಪರದಾಟ' ಶೀರ್ಷಿಕೆಯಡಿ 'ವಿಕ' ವಿಶೇಷ ವರದಿ ಪ್ರಕಟಿಸಿ ಸರಕಾರ ಹಾಗೂ ಇಲಾಖೆಯ ಗಮನ ಸೆಳೆದಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ