ಆ್ಯಪ್ನಗರ

Gauri Lankesh: ಗೌರಿ ಹತ್ಯೆ ಕೇಸಲ್ಲಿ ಮತ್ತೊಬ್ಬ ಆರೋಪಿ ಬಂಧನ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಮಡಿಕೇರಿ ಮೂಲದ ರಾಜೇಶ್‌ ಡಿ. ಬಂಗೇರಾ (50) ಎಂಬಾತನನ್ನು ಎಸ್‌ಐಟಿ ಬಂಧಿಸಿದ್ದಾರೆ.

Vijaya Karnataka 25 Jul 2018, 10:45 am
ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಮಡಿಕೇರಿ ಮೂಲದ ರಾಜೇಶ್‌ ಡಿ. ಬಂಗೇರಾ (50) ಎಂಬಾತನನ್ನು ಎಸ್‌ಐಟಿ ಬಂಧಿಸಿದ್ದಾರೆ.ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳ ಸಂಖ್ಯೆ 10ಕ್ಕೇರಿದೆ. ಬಂಧಿತ ರಾಜೇಶ್‌ನನ್ನು ಮಂಗಳವಾರ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಆಗಸ್ಟ್‌.6ರವರೆಗೆ ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದರು.
Vijaya Karnataka Web 7A2CDB82-DAA4-4CD8-A495-E3A36DC6D398


ಕಳೆದ ವಾರ ಬಂಧಿತನಾಗಿದ್ದ ನಾಟಿವೈದ್ಯ ಮೋಹನ್‌ ನಾಯಕ್‌ ಮಾಹಿತಿ ಆಧರಿಸಿ ರಾಜೇಶ್‌ನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಮುಖ ಆರೋಪಿಗಳಿಂದ ವಶಪಡಿಸಿಕೊಂಡಿರುವ ಡೈರಿಯಲ್ಲಿ ರಾಜೇಶ್‌ ಕುರಿತು ಮಾಹಿತಿ ಇತ್ತು. ಈ ಬಗ್ಗೆ ನೋಟಿಸ್‌ ನೀಡಿ ವಿಚಾರಣೆಗೆ ಕರೆದಿದ್ದ ಅಧಿಕಾರಿಗಳು ನಂತರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಗುಮಾಸ್ತನಾಗಿರುವ ರಾಜೇಶ್‌ಗೆ ಪ್ರಮುಖ ಆರೋಪಿ ಅಮೋಲ್‌ ಕಾಳೆ ಜತೆಗೆ ನಂಟಿರುವುದು ತಿಳಿದು ಬಂದಿದೆ. ಪ್ರಕರಣದಲ್ಲಿ ಆರೋಪಿ ರಾಜೇಶ್‌ ಪಾತ್ರದ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ