ಆ್ಯಪ್ನಗರ

ಗೌರಿ ಹತ್ಯೆ ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯಾ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ವೈಜ್ಞಾನಿಕ ತನಿಖಾ ಮಾರ್ಗಗಳ ಮೂಲಕ ಆರೋಪಿಗಳನ್ನು ಬಂಧಿಸಿದಕ್ಕಾಗಿ ರಾಜ್ಯ ...

Vijaya Karnataka 28 May 2019, 5:00 am
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯಾ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ವೈಜ್ಞಾನಿಕ ತನಿಖಾ ಮಾರ್ಗಗಳ ಮೂಲಕ ಆರೋಪಿಗಳನ್ನು ಬಂಧಿಸಿದಕ್ಕಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ.
Vijaya Karnataka Web 9FC17ADC-B8F5-482A-BAAC-66F2D36C7298


ಘಟನಾ ಸ್ಥಳದಲ್ಲಿ ಸಣ್ಣದೊಂದು ಸಾಕ್ಷ್ಯವನ್ನೂ ಉಳಿಸದಂತೆ ಅತೀ ಎಚ್ಚರಿಕೆಯಿಂದ ಅಗತ್ಯ ತರಬೇತಿ ಪಡೆದು ನಡೆಸಲಾಗಿದ್ದ ಕೃತ್ಯವನ್ನು ಪತ್ತೆ ಹಚ್ಚುವುದು ದೊಡ್ಡ ಸವಾಲಿನ ಕೆಲಸವಾಗಿತ್ತು. ಎಷ್ಟೇ ಒತ್ತಡವಿದ್ದರೂ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಡಿಎನ್‌ಎ ಪ್ರೊಫೈಲಿಂಗ್‌ ಹಾಗೂ ಗೇಯ್ಟ್‌ ಅನಾಲಿಸಿಸ್‌ ಥರದ ವೈಜ್ಞಾನಿಕ ಮಾದರಿ ಅನುಸರಿಸಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಎಸ್‌ಐಟಿ ಯಶಸ್ವಿ ಆಗಿದೆ ಎಂದು ಅಭಿಪ್ರಾಯ ಪಟ್ಟಿರುವ ಸರಕಾರ, ಎಸ್‌ಐಟಿ ಮುಖ್ಯಸ್ಥರಾದ ಹೆಚ್ಚುವರಿ ಆಯುಕ್ತ ಬಿ.ಕೆ.ಸಿಂಗ್‌ ಹಾಗೂ ಡಿಸಿಪಿ ಅನುಚೇತ್‌ ನೇತೃತ್ವದ ತಂಡಕ್ಕೆ ಅಭಿನಂದನೆ ಸಲ್ಲಿಸುವ ಜತೆಗೆ, ಸರಕಾರ 25 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ.

ಎಸ್‌ಐಟಿ ಯಲ್ಲಿರುವ 90 ಸಿಬ್ಬಂದಿಗೆ ಈ ನಗದು ಬಹುಮಾನ ಹಂಚಿಕೆ ಆಗಲಿದೆ. ತಂಡದಲ್ಲಿ ಹಲವಾರು ಮಂದಿ ಎಸಿಪಿಗಳು, ಇನ್ಸ್‌ಪೆಕ್ಟರ್‌ಗಳ ತಂಡವೇ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ