ಆ್ಯಪ್ನಗರ

ಪರಿಶಿಷ್ಟರ ಉಪಯೋಜನೆ ಅನುದಾನ ಬಳಕೆಗೆ ನಿಯಮ ರಚನೆ

ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆಗಾಗಿ ರಾಜ್ಯ ಯೋಜನೆ ವೆಚ್ಚದಲ್ಲಿ ಶೇ.24.10ರಷ್ಟು ಅನುದಾನ ಹಂಚಿಕೆಯ ಅಧಿನಿಯಮಕ್ಕೆ ಕೆಲ ತಿದ್ದುಪಡಿ ಮಾಡಿ ನಿಯಮಗಳನ್ನು ಹೊಸದಾಗಿ ರಚಿಸಲಾಗಿದೆ. ​

Vijaya Karnataka Web 16 Jul 2018, 7:56 am
ಬೆಂಗಳೂರು : ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆಗಾಗಿ ರಾಜ್ಯ ಯೋಜನೆ ವೆಚ್ಚದಲ್ಲಿ ಶೇ.24.10ರಷ್ಟು ಅನುದಾನ ಹಂಚಿಕೆಯ ಅಧಿನಿಯಮಕ್ಕೆ ಕೆಲ ತಿದ್ದುಪಡಿ ಮಾಡಿ ನಿಯಮಗಳನ್ನು ಹೊಸದಾಗಿ ರಚಿಸಲಾಗಿದೆ.
Vijaya Karnataka Web priyank kharge


ಎಸ್‌ಸಿ/ಎಸ್‌ಟಿ ಜನರಿಗೆ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೆ ತರಲು ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಅಭಿವೃದ್ಧಿ ಪರಿಷತ್‌ ರಚಿಸಲಾಗಿದೆ. ಕಾರ್ಯನೀತಿಗಳಿಗೆ ಸಲಹೆ ನೀಡುವುದು ಹಾಗೂ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡುವ ಅಧಿಕಾರವನ್ನು ಸಮಿತಿ ಹೊಂದಿರುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
ಪರಿಷತ್‌ಗೆ ಪೂರಕವಾಗಿ ಕಾರ್ಯನಿರ್ವಹಿಸಲು ಸಚಿವರ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳನ್ನು ಒಳಗೊಂಡ ನೋಡಲ್‌ ಏಜೆನ್ಸಿಯನ್ನು ರಚಿಸಲಾಗಿದೆ. ನಾನಾ ಇಲಾಖೆಗಳ ಕ್ರಿಯಾ ಯೋಜನೆಯನ್ನು ಪರಿಷತ್‌ಗೆ ಶಿಫಾರಸು ಮಾಡುವ ಅಧಿಕಾರ ಹೊಂದಿರುತ್ತದೆ. ಇದೆ ರೀತಿ ಜಿಲ್ಲಾ ಮಟ್ಟದಲ್ಲಿ ಡಿಸಿ ಹಾಗೂ ತಾಲೂಕು ಮಟ್ಟದಲ್ಲಿ ತಾ.ಪಂ. ಸಿಇಒ ಅಧ್ಯಕ್ಷತೆಯಲ್ಲಿ ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಲಾಗಿದೆ.

29,209 ಕೋಟಿ ರೂ. ನಿಗದಿ: ‘‘2018-19ನೇ ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಟರ ಉಪಯೋಜನೆ ಕಾರ್ಯಕ್ರಮದಡಿ 29,209.47 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ. ಈ ಅನುದಾನ ಸದ್ಬಳಕೆಗೆ ಕ್ರಿಯಾ ಯೋಜನೆಗಳಿಗೆ ಸದ್ಯದಲ್ಲೇ ಒಪ್ಪಿಗೆ ನೀಡಿ ಜಾರಿಗೆ ಕ್ರಮ ವಹಿಸಲಾಗುತ್ತದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾರ್ಗಸೂಚಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು,’’ ಎಂದು ಸಚಿವ ಖರ್ಗೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ