ಆ್ಯಪ್ನಗರ

ಹುಡುಗಿ ಒಪ್ಪಿದರೆ ಮೊಮ್ಮಗ ನಿಖಿಲ್ ವಿವಾಹ ಎಂದ ದೇವೇಗೌಡರು

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಂಪತಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಕನ್ಯೆ ನೋಡಲು ಹೋಗಿರುವ ವಿಷಯ ವೈಯಕ್ತಿಕವಾಗಿದ್ದು, ಹುಡುಗಿ ಒಪ್ಪಿದರೆ ಮದುವೆ ಮಾಡಿಸೋಣ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ

Vijaya Karnataka Web 31 Aug 2018, 2:25 pm
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಂಪತಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಕನ್ಯೆ ನೋಡಲು ಹೋಗಿರುವ ವಿಷಯ ವೈಯಕ್ತಿಕವಾಗಿದ್ದು, ಹುಡುಗಿ ಒಪ್ಪಿದರೆ ಮದುವೆ ಮಾಡಿಸೋಣ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
Vijaya Karnataka Web devegowda


ಪದ್ಮನಾಭನಗರ ನಿವಾಸಕ್ಕೆ ದೇವೇಗೌಡರನ್ನು ಭೇಟಿಯಾಗಲು ಬ್ರಿಟಿಷ್ ಹೈ ಕಮಿಷನರ್ ಆಗಮಿಸಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸಿಂಗ್ ಮುಖ್ಯಮಂತ್ರಿಯಾಗುವ ಸಂದರ್ಭದಲ್ಲೇ ಸಚಿವ ಆರ್. ವಿ. ದೇಶಪಾಡೆ ಹೆಸರು ಕೂಡ ಕೇಳಿ ಬಂದಿತ್ತು. ದೇಶಪಾಂಡೆ ಅವರು ಕೈಗಾರಿಕಾ ಸಚಿವರಾಗಿ ಸಾಕಷ್ಟು ಅನುಭವ ಪಡೆದಿದ್ದಾರೆ. ಹೀಗಾಗಿ ಅವರ ಹೆಸರು ಮತ್ತೆ ಮುಂಚೂಣಿಗೆ ಬಂದಿದೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಮೈತ್ರಿ ಸರಕಾರ ಬಿದ್ದು ಹೋಗುತ್ತದೆ ಎಂಬ ಬಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಸದ್ಯದರಲ್ಲಿಯೇ ಗೊಂದಲ ನಿವಾರಣೆಯಾಗುತ್ತದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಯುತ್ತೆ. ಜೆಡಿಎಸ್ ಹಾಗೂ ಕಾಂಗ್ರೆಸ್, ಬಿಜೆಪಿ ಜತೆ ಹೋಗಲು ಸಿದ್ಧವಿಲ್ಲ. ಹೀಗಾಗಿ ಕುಮಾರಸ್ವಾಮಿ ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ