ಆ್ಯಪ್ನಗರ

ನಾನು ಮಾಡಿದ ತಪ್ಪೇನು: ರಾಜೀನಾಮೆ ನೀಡುವ ನಿರ್ಧಾರದ ಬಳಿಕ ಎಚ್. ನಾಗೇಶ್ ಪ್ರಶ್ನೆ!

ರಾಜೀನಾಮೆ ಕೊಡುವಂತ ತಪ್ಪು ನಾನೇನು ಮಾಡಿಲ್ಲ, ನನ್ನ ವಿರುದ್ಧ ಯಾವುದೇ ದೂರುಗಳಿಲ್ಲ, ಹೀಗಿದ್ದರೂ ಜನರಲ್ ಆಗಿ ರಾಜೀನಾಮೆ ಕೊಡಲು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗಲು ನಾನೇ ಕಾರಣ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನನ್ನದು ಪಾತ್ರವಿದೆ. ಇನ್ನೂ ಮೂರು ವರ್ಷ ನೀನು ಮಂತ್ರಿ ಆಗಿರುತ್ತೀಯಾ ಎಂದು ಸಿಎಂ ಹೇಳುತ್ತಿದ್ದರು, ಆದರೆ ಇದ್ದಕ್ಕಿದ್ದಂತೆ ರಾಜೀನಾಮೆ ಕೇಳಿದ್ದಾರೆ ಎಂದು ನಾಗೇಶ್ ತಿಳಿಸಿದ್ದಾರೆ.

Vijaya Karnataka Web 13 Jan 2021, 3:05 pm
ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜಿನಾಮೆಗೆ ಕಾರಣ ಹೇಳಿಲ್ಲ, ಆದರೆ ಸಚಿವ ಸ್ಥಾನಕ್ಕೆ ಸಮಾನಾಂತರವಾದ ಹುದ್ದೆ ನೀಡುತ್ತಾರಂತೆ. ಸಿಎಂ ಮಾತಿಗೆ ಬೆಲೆಕೊಟ್ಟು ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
Vijaya Karnataka Web H Nagesh


ರಾಜೀನಾಮೆ ಕೊಡುವಂತ ತಪ್ಪು ನಾನೇನು ಮಾಡಿಲ್ಲ, ನನ್ನ ವಿರುದ್ಧ ಯಾವುದೇ ದೂರುಗಳಿಲ್ಲ, ಹೀಗಿದ್ದರೂ ಜನರಲ್ ಆಗಿ ರಾಜೀನಾಮೆ ಕೊಡಲು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗಲು ನಾನೇ ಕಾರಣ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನನ್ನದು ಪಾತ್ರವಿದೆ. ಇನ್ನೂ ಮೂರು ವರ್ಷ ನೀನು ಮಂತ್ರಿ ಆಗಿರುತ್ತೀಯಾ ಎಂದು ಸಿಎಂ ಹೇಳುತ್ತಿದ್ದರು, ಆದರೆ ಇದ್ದಕ್ಕಿದ್ದಂತೆ ರಾಜೀನಾಮೆ ಕೇಳಿದ್ದಾರೆ ಎಂದು ನಾಗೇಶ್ ತಿಳಿಸಿದ್ದಾರೆ.

ಸಚಿವ ಸ್ಥಾನದ ಪಟ್ಟಿಯಲ್ಲಿ ನಾಗೇಶ್‌ ಹೆಸರು ಕೂಡ ಇತ್ತು. ಆದರೆ ನಂತರ ನಡೆದ ಬೆಳವಣಿಗೆಯಲ್ಲಿ ರಾಜೀನಾಮೆ ನೀಡುವಂತೆ ನಾಗೇಶ್‌ಗೆ ಸಿಎಂ ಬಿಎಸ್‌ ಯಡಿಯೂರಪ್ಪ ಮನವಿ ಮಾಡಿದರು ಎನ್ನಲಾಗಿದೆ. ಆದರೆ ನಾಗೇಶ್‌ ರಾಜೀನಾಮೆ ನೀಡಲು ಆರಂಭದಲ್ಲಿ ನಿರಾಕರಿಸಿದ್ದರು ನಂತರ ಒಪ್ಪಿಗೆ ನೀಡಿದ್ದಾರೆ.

ಸಂಪುಟ ವಿಸ್ತರಣೆ ಎಫೆಕ್ಟ್‌: ಸಚಿವ ಸ್ಥಾನಕ್ಕೆ ಹೆಚ್‌. ನಾಗೇಶ್ ರಾಜೀನಾಮೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ