ಆ್ಯಪ್ನಗರ

ಸಿದ್ದರಾಮಯ್ಯ ಹಾಗೂ ನಾನು ಅಣ್ತಮ್ಮಂದಿರು! - ಹಳ್ಳಿಹಕ್ಕಿ ಯೂಟರ್ನ್

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ನಾನು ಅಣ್ಣ ತಮ್ಮಂದಿರು ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್‌. ವಿಶ್ವನಾಥ್ ನೀಡಿರುವ ಹೇಳಿಕೆ ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ ವಿರುದ್ಧ ಕಿಡಿಕಾರುತ್ತಿದ್ದ ವಿಶ್ವನಾಥ್ ಇದೀಗ ಯೂ ಟರ್ನ್ ಹೊಡೆದಿದ್ದಾರೆ.

Vijaya Karnataka Web 11 Dec 2019, 6:28 pm
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ನಾನು ಅಣ್ಣ ತಮ್ಮಂದಿರು ಇದ್ದಹಾಗೆ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದರು.
Vijaya Karnataka Web h vishwanath statement on siddaramaiah
ಸಿದ್ದರಾಮಯ್ಯ ಹಾಗೂ ನಾನು ಅಣ್ತಮ್ಮಂದಿರು! - ಹಳ್ಳಿಹಕ್ಕಿ ಯೂಟರ್ನ್


ಸಿದ್ದರಾಮಯ್ಯ ಹಾಗೂ ನಾನು ಕುರುಬ ಸಮುದಾಯಕ್ಕೆ ಸೇರಿದವರು. ನಮ್ಮದು ಒಂದು ರೀತಿಯಲ್ಲಿ ಸಹೋದರರ ನಡುವಿನ ಕಿತ್ತಾಟವಾಗಿದೆ. ಅದರ ಹೊರತಾಗಿ ನಾವು ಅಣ್ಣ ತಮ್ಮಂದಿರು ಇದ್ದ ಹಾಗೆ ಎಂದಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಕಿಡಿಕಾರುತ್ತಲೇ ಬಂದಿರುವ ಎಚ್‌. ವಿಶ್ವನಾಥ್ ಇದೀಗ ದಿಢೀರ್ ಯೂಟರ್ನ್ ಹೊಡೆದಿರುವುದು ಕುತೂಹಲ ಕೆರಳಿಸಿದೆ. ಇದೇ ವೇಳೆ ಮಾತನಾಡಿದ ಅವರು ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಯಾವುದೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿಲ್ಲ ಎಂದರು.

ಉಪಚುನಾವಣೆಯಲ್ಲಿ ಹುಣಸೂರಿನಲ್ಲಿ ಸ್ಪರ್ಧಿಸಿ ಸೋತಿರಬಹುದು ಆದರೆ ನಮ್ಮ ಉದ್ದೇಶ ಈಡೇರಿದೆ. ಇನ್ಮುಂದೆ ನಮಗೆ ಬಿಎಸ್ ಯಡಿಯೂರಪ್ಪನವರೇ ಹೈ ಕಮಾಂಡ್ ಎಂದರು.

ಪೌರತ್ವ ಮಸೂದೆಗೆ ವಿರೋಧ- ಕೆಪಿಸಿಸಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಇದೇ ವೇಳೆ ತಮ್ಮ ಪಕ್ಷಾಂತರವನ್ನು ಸಮರ್ಥಿಸಿಕೊಂಡ ಅವರು, ಮೂರು ವರ್ಷದಲ್ಲಿ ಮೂರು ಪಕ್ಷವನ್ನು ಬದಲಾಯಿದೆ ಎನ್ನುತ್ತಾರೆ. ರಾಜ್ಯದಲ್ಲಿ ಅಯೋಗ್ಯ ಸರಕಾರ ಕಿತ್ತೊಗೆಯಲು ಪಕ್ಷವನ್ನು ಬದಲಾಯಿಸಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ 9 ಬಾರಿ ಪಕ್ಷವನ್ನು ಬದಲಾಯಿಸಿದ್ದಾರೆ. ಇದು ಪಕ್ಷಾಂತರ ಅಲ್ಲವೇ ಎಂದು ಪ್ರಶ್ನಿಸಿದರು.

ಎಚ್. ವಿಶ್ವನಾಥ್ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್‌ನ ಎಚ್.ಪಿ ಮಂಜುನಾಥ್ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರಕಾರ ಪತನಕ್ಕೆ ವಿಶ್ವನಾಥ್ ಮಹತ್ವದ ಪಾತ್ರ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ