ಆ್ಯಪ್ನಗರ

ರಾಜ್ಯದಲ್ಲಿ ಎಚ್‌1ಎನ್‌1 ಉಲ್ಬಣ ; 15 ದಿನದಲ್ಲಿ 20 ಮಂದಿ ಬಲಿ

ರಾಜ್ಯದಲ್ಲಿ ಎಚ್‌1ಎನ್‌1 ಮತ್ತೆ ಉಲ್ಬಣಗೊಂಡಿದ್ದು, ಕಳೆದ 15 ದಿನದಲ್ಲಿ 20 ಮಂದಿ ಮೃತಪಟ್ಟಿರುವುದು ಆತಂಕ ಮೂಡಿಸಿದೆ...

Vijaya Karnataka 26 May 2019, 5:00 am
ಬೆಂಗಳೂರು: ರಾಜ್ಯದಲ್ಲಿ ಎಚ್‌1ಎನ್‌1 ಮತ್ತೆ ಉಲ್ಬಣಗೊಂಡಿದ್ದು, ಕಳೆದ 15 ದಿನದಲ್ಲಿ 20 ಮಂದಿ ಮೃತಪಟ್ಟಿರುವುದು ಆತಂಕ ಮೂಡಿಸಿದೆ.
Vijaya Karnataka Web tetascope


ಉಡುಪಿ ಜಿಲ್ಲೆಯಲ್ಲಿ 8 ಮಂದಿ, ಶಿವಮೊಗ್ಗದಲ್ಲಿ ಆರು ಮಂದಿ ಸೇರಿದಂತೆ 20 ಮಂದಿ ಎಚ್‌1ಎನ್‌1 ಸೋಂಕಿತರು ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸೋಂಕು ವ್ಯಾಪಕವಾಗಿ ಹರಡದಂತೆ ಎಚ್ಚರ ವಹಿಸಲು ಆರೋಗ್ಯ ಇಲಾಖೆ ಎಲ್ಲಾ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಉಡುಪಿ 8, ಶಿವಮೊಗ್ಗ 6, ದಾವಣಗೆರೆ, ಬೆಂಗಳೂರು ನಗರ 1, ಚಿಕ್ಕಮಗಳೂರು 1, ಗದಗ 1, ರಾಮನಗರ 1 ಸೇರಿ ಹದಿನೈದು ದಿನಗಳಲ್ಲಿ ಇಪ್ಪತ್ತು ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ರಾಜ್ಯದಲ್ಲಿ ಜನವರಿಯಿಂದ ಶಂಕಿತ 6,318 ಮಂದಿ ಸ್ವ್ಯಾಬ್‌ (ಗಂಟಲಿನ ದ್ರವ) ಮಾದರಿಯನ್ನು ಪರೀಕ್ಷೆ ಮಾಡಲಾಗಿದ್ದು, 1,607 ಮಂದಿ ಸೋಂಕಿತರಲ್ಲಿ 76 ಮಂದಿ ಸಾವನ್ನಪ್ಪಿದ್ದಾರೆ. ಮೇ 28ರಂದು ಡೆಟ್‌ ಆಡಿಟ್‌ ಕಮಿಟಿ ಪುನಃ ಸಭೆ ನಡೆಸಲಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಎಚ್‌1ಎನ್‌1 ಸಾವಿನ ಸಂಖ್ಯೆ ಏರಿಕೆ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಿರುವ ಆರೋಗ್ಯ ಇಲಾಖೆಯು ಎಲ್ಲಾ ಆಸ್ಪತ್ರೆಗಳಲ್ಲೂ ಔಷಧ ಪೂರೈಕೆಗೆ ಅಗತ್ಯ ಕ್ರಮ ಕೈಗೊಂಡಿದೆ. ಈವರೆಗೆ 64,126 ಟಾಮಿಫ್ಲೂ ಔಷಧ ನೀಡಲಾಗಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ರೋಗ ಉಲ್ಬಣಗೊಂಡಾಗ ಆಸ್ಪತ್ರೆಗೆ ಸೇರ್ಪಡೆ ಮಾಡಿ ಚಿಕಿತ್ಸೆ ನೀಡಲು ವೆಂಟಿಲೇಟರ್‌ ಅಳವಡಿಸಿದ 5 ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

''ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ತುಸು ಹೆಚ್ಚು ಎಚ್‌1ಎನ್‌1 ಪ್ರಕರಣಗಳು ವರದಿಯಾಗುತ್ತಿವೆ,'' - ಡಾ. ಸಜ್ಜನ್‌ ಶೆಟ್ಟಿ, ಜಂಟಿ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ