ಆ್ಯಪ್ನಗರ

ನ್ಯಾಯಾಧೀಶರ ನಿಂದನೆ; ಬೇಷರತ್‌ ಕ್ಷಮೆ ಕೋರಿದ ವಕೀಲನ ವಿರುದ್ಧದ ಪ್ರಕರಣ ಕೈಬಿಟ್ಟ ಹೈಕೋರ್ಟ್‌

ಸಿಂದಗಿ ಹಿರಿಯ ಸಿವಿಲ್‌ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದರು. ಆ ಬಗ್ಗೆ ನ್ಯಾಯಾಧೀಶರು 2020ರ ಜೂ.21ರಂದು ಹೈಕೋರ್ಟ್‌ ಸಿಜೆಗೆ ಆಡಳಿತಾತ್ಮಕ ಟಿಪ್ಪಣಿ ಬರೆದಿದ್ದರು. ವಕೀಲ ಪಾಟೀಲ್‌ ಭಾಷೆ ಹಾಗೂ ಸನ್ನೆ ಮೂಲಕ ಬೆದರಿಕೆ ಹಾಕಿ ನ್ಯಾಯಾಲಯಕ್ಕೆ ಅಗೌರವ ಹಾಗೂ ಅನುಚಿತ ವರ್ತನೆ ತೊರಿದ್ದಾರೆ. ನ್ಯಾಯದಾನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆಂದು ಟಿಪ್ಪಣಿಯಲ್ಲಿ ತಿಳಿಸಿದ್ದರು.

Vijaya Karnataka 20 Oct 2021, 3:02 pm
ಬೆಂಗಳೂರು: ಅಧೀನ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ನಿಂದನೀಯ ಭಾಷೆ ಬಳಸಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ವಕೀಲ ಎಂ.ವೈ. ಪಾಟೀಲ್‌ ಬೇಷರತ್‌ ಕ್ಷಮೆ ಕೋರಿದ ಹಿನ್ನೆಲೆಯಲ್ಲಿ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಹೈಕೋರ್ಟ್‌ ಕೈಬಿಟ್ಟಿದೆ.
Vijaya Karnataka Web Karnataka high court
File photo of Karnataka high court


ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಚ್‌.ಬಿ. ಪ್ರಭಾಕರಶಾಸ್ತ್ರಿ ಅವರಿದ್ದ ವಿಭಾಗೀಯ ಪೀಠ, ಈ ಆದೇಶ ಮಾಡಿದೆ. ‘ನ್ಯಾಯಾಲಯದ ಸೂಚನೆಯಂತೆ ಯಾವ ನ್ಯಾಯಾಧೀಶರನ್ನು ಅಸಭ್ಯ ಭಾಷೆ ಬಳಸಿ ನಿಂದಿಸಲಾಗಿತ್ತೋ ಅವರ ಮುಂದೆಯೇ ವಕೀಲ ಪಾಟೀಲ್‌ ಹಾಜರಾಗಿ ತಮ್ಮ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿ ಬೇಷರತ್‌ ಕ್ಷಮೆ ಕೋರಿದ್ದಾರೆ. ಹಾಗಾಗಿ, ಪಾಟೀಲ್‌ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಡಲಾಗುತ್ತಿದೆ’ ಎಂದು ನ್ಯಾಯಪೀಠ ಹೇಳಿದೆ. ಅಲ್ಲದೆ, ಅಂತಹ ವರ್ತನೆ ಭವಿಷ್ಯದಲ್ಲಿ ತೋರುವುದಿಲ್ಲ ಎಂಬ ಭರವಸೆ ಇದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ಮ್ಯಾಜಿಸ್ಪ್ರೇಟ್‌ ಕೋರ್ಟ್‌ ಅನುಸರಿಸಬೇಕಾದ ಕ್ರಮಗಳ ಕುರಿತು ಹೊಸ ಮಾರ್ಗಸೂಚಿ ಹೊರಡಿಸಿದ ಹೈಕೋರ್ಟ್
ಹಿನ್ನೆಲೆ ಏನು?
ಕೌಟುಂಬಿಕ ವ್ಯಾಜ್ಯದ ವಿಚಾರಣೆ ಸಂದರ್ಭದಲ್ಲಿ ವಕೀಲ ಎಂ.ವೈ. ಪಾಟಿಲ್‌, ಸಿಂದಗಿ ಹಿರಿಯ ಸಿವಿಲ್‌ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದರು. ಆ ಬಗ್ಗೆ ನ್ಯಾಯಾಧೀಶರು 2020ರ ಜೂ.21ರಂದು ಹೈಕೋರ್ಟ್‌ ಸಿಜೆಗೆ ಆಡಳಿತಾತ್ಮಕ ಟಿಪ್ಪಣಿ ಬರೆದಿದ್ದರು. ವಕೀಲ ಪಾಟೀಲ್‌ ಭಾಷೆ ಹಾಗೂ ಸನ್ನೆ ಮೂಲಕ ಬೆದರಿಕೆ ಹಾಕಿ ನ್ಯಾಯಾಲಯಕ್ಕೆ ಅಗೌರವ ಹಾಗೂ ಅನುಚಿತ ವರ್ತನೆ ತೊರಿದ್ದಾರೆ. ನ್ಯಾಯದಾನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆಂದು ಟಿಪ್ಪಣಿಯಲ್ಲಿ ತಿಳಿಸಿದ್ದರು.
ರೈತರ ಪ್ರತಿಭಟನೆ ತೆರವು: ತ್ವರಿತ ಅರ್ಜಿ ವಿಚಾರಣೆಗಾಗಿ ಸುಪ್ರೀಂಕೋರ್ಟ್‌ಗೆ ಮನವಿ
ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್‌, ವಕೀಲ ಎಂ.ವೈ. ಪಾಟೀಲ್‌ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು. 2021ರ ಆ.17ರಂದು ಅರ್ಜಿ ವಿಚಾರಣೆಗೆ ಬಂದಾಗ ಆರೋಪಿ ವಕೀಲ ಪಾಟೀಲ್‌ ತಮ್ಮ ವರ್ತನೆಗೆ ಬೇಷರತ್‌ ಕ್ಷಮೆಯಾಚಿಸಿ ಪ್ರಮಾಣಪತ್ರ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಹೈಕೋರ್ಟ್‌, ಯಾವ ನ್ಯಾಯಾಧೀಶರ ವಿರುದ್ಧ ನಿಂದಿಸಲಾಗಿತ್ತೋ ಅವರ ಬಳಿಯೇ ತೆರಳಿ ಬೇಷರತ್‌ ಕ್ಷಮೆ ಯಾಚಿಸಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚಿಸಿತ್ತು. ಅದರಂತೆ ಎಂ.ವೈ.ಪಾಟೀಲ್‌ 2021ರ ಅ.7ರಂದು ನ್ಯಾಯಾಧೀಶರ ಮುಂದೆ ಹಾಜರಾಗಿ ಬೇಷರತ್‌ ಕ್ಷಮೆಯಾಚಿಸಿ ಪ್ರಮಾಣಪತ್ರ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಹೈಕೋರ್ಟ್‌, ವಕೀಲ ಪಾಟೀಲ್‌ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ