ಆ್ಯಪ್ನಗರ

ಅಂತರಧರ್ಮ ವಿವಾಹಿತ ದಂಪತಿಗೆ ಭದ್ರತೆ ಒದಗಿಸಲು ಹೈಕೋರ್ಟ್‌ ಆದೇಶ

ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಸಮೀಪದ ತಿಮ್ಲಾಪುರದ ಹಿಂದೂ ಯುವತಿ, ಮುಸ್ಲಿಂ ಯುವಕ ಪರಸ್ಪರ ಪ್ರೀತಿಸಿ ಮದುವೆಯಾಗಿರುವ ಹಿನ್ನೆಲೆಯಲ್ಲಿ ಆ ದಂಪತಿಗೆ ಸೂಕ್ತ ಭದ್ರತೆ ಒದಗಿಸುವಂತೆ ಹೈಕೋರ್ಟ್‌ ಸೋಮವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

Vijaya Karnataka 24 Jul 2018, 7:23 am
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಸಮೀಪದ ತಿಮ್ಲಾಪುರದ ಹಿಂದೂ ಯುವತಿ, ಮುಸ್ಲಿಂ ಯುವಕ ಪರಸ್ಪರ ಪ್ರೀತಿಸಿ ಮದುವೆಯಾಗಿರುವ ಹಿನ್ನೆಲೆಯಲ್ಲಿ ಆ ದಂಪತಿಗೆ ಸೂಕ್ತ ಭದ್ರತೆ ಒದಗಿಸುವಂತೆ ಹೈಕೋರ್ಟ್‌ ಸೋಮವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.
Vijaya Karnataka Web High Court


ಯುವಕ ತಮ್ಮ ಪತ್ನಿ(ಯುವತಿ)ಯನ್ನು ಅಕ್ರಮ ಬಂಧನದಲ್ಲಿಡಲಾಗಿದೆ ಎಂದು ಸಲ್ಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿಯನ್ನು ಆಲಿಸಿದ ನ್ಯಾ.ರಾಘವೇಂದ್ರ ಚವ್ಹಾಣ್‌ ಅವರಿದ್ದ ವಿಭಾಗೀಯ ಪೀಠ ತಮ್ಮ ಚೇಂಬರ್‌ನಲ್ಲಿ ವಿಚಾರಣೆ ನಡೆಸಿದ ನಂತರ ಈ ಆದೇಶ ಹೊರಡಿಸಿದೆ.

ಯುವತಿಯನ್ನು ತುಂಗಾನಗರ ಪೊಲೀಸರು ಸೋಮವಾರ ನ್ಯಾಯಪೀಠದ ಮುಂದೆ ಹಾಜರುಪಡಿಸಿದರು. ಯುವತಿ, ವಯಸ್ಕಳಾಗಿರುವ ಹಿನ್ನೆಲೆಯಲ್ಲಿ ಮತ್ತು ಆಕೆ ಈಗಾಗಲೇ ಅರ್ಜಿದಾರನ ಜೊತೆ ವಿವಾಹವಾಗಿದ್ದು,ಆತನ ಜೊತೆಯಲ್ಲೇ ಬಾಳ್ವೆ ನಡೆಸಲು ಇಂಗಿತ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಆಕೆಯನ್ನು ಅರ್ಜಿದಾರನ ಜೊತೆ ಕಳುಹಿಸಲು ನ್ಯಾಯಾಲಯ ಆದೇಶ ನೀಡಿತು.

ಆ ವೇಳೆ ಅಂತರಧರ್ಮ ಮದುವೆಯಾಗಿರುವ ದಂಪತಿಗೆ ಸೂಕ್ತ ಭದ್ರತೆ ಒದಗಿಸಬೇಕು, ಇಲ್ಲವಾದರೆ ಅರ್ಜಿದಾರರು ನ್ಯಾಯಾಂಗ ನಿಂದನೆ ಅರ್ಜಿ ಹೂಡಬಹುದು ಎಂದು ಆದೇಶಿಸಿದೆ.

ಸಕ್ರೆಬೈಲು ಸಮೀಪದ ತಿಮ್ಲಾಪುರ ಗ್ರಾಮದಯುವಕ ಅಲ್ಲೇ ಆನೆ ಕ್ಯಾಂಪ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕಾವಡಿಯಾಗಿ ಕೆಲಸ ಮಾಡುತ್ತಿದ್ದನು. ಅದೇ ಗ್ರಾಮದ ಹಿಂದೂ ಯುವತಿ ಹಾಗೂ ಆತ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಜೂ.28ರಂದು ಮೈಸೂರಿನಲ್ಲಿ ವಿವಾಹವಾಗಿದ್ದರು, ಬಳಿಕ ಆಕೆಯನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಲಾಗಿದೆ. ಆನಂತರ ಇಬ್ಬರೂ ಜೊತೆಯಾಗಿ ಬದುಕುತ್ತಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ