ಆ್ಯಪ್ನಗರ

ಎಪಿಎಂಸಿ‌ ಕಾಯಿದೆ ತಿದ್ದುಪಡಿ ಹಿಂಪಡೆಯಲು ಎಚ್.ಡಿ. ದೇವೇಗೌಡ ಆಗ್ರಹ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರೂ ಕೂಡ ಎಪಿಎಂಸಿ ಕಾಯಿದೆ ತಿದ್ದುಪಡಿ ವಿರುದ್ಧ ದ್ವನಿ ಎತ್ತಿದ್ದಾರೆ. ತಿದ್ದುಪಡಿ ಕಾಯಿದೆಯನ್ನು ಸದನದಲ್ಲಿ ಮುಂಡಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Vijaya Karnataka Web 14 May 2020, 4:03 pm
ಬೆಂಗಳೂರು: ಎಪಿಎಂಸಿ ಕಾಯಿದೆಯನ್ನು ತಿದ್ದುಪಡಿಗೊಳಿಸಿ 2017ರ 'ಮಾದರಿ ಕೃಷಿ ಉತ್ಪನ್ನ ಮತ್ತು ಜೀವನೋಪಾಯ ಮಾರುಕಟ್ಟೆ ಕಾಯಿದೆ'ಯನ್ನು (ಎಪಿಎಂಎಲ್‌ ಕಾಯಿದೆ) ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಕುರಿತು ರಾಜ್ಯ ಸರಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.
Vijaya Karnataka Web HDD


ಇದೀಗ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರೂ ಕೂಡ ಎಪಿಎಂಸಿ ಕಾಯಿದೆ ತಿದ್ದುಪಡಿ ವಿರುದ್ಧ ದ್ವನಿ ಎತ್ತಿದ್ದಾರೆ.

ಇಡೀ ರಾಜ್ಯ ಕೊರೊನಾ ವಿರುದ್ಧ ಸಮರ ನಡೆಸುತ್ತಿರುವ ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಎಪಿಎಂಸಿ‌ ಕಾಯಿದೆಗೆ ತಿದ್ದುಪಡಿ ಮಾಡಲು ಹೊರಟಿರೋದು ಸರಿಯಲ್ಲ. ರೈತ ಸಮುದಾಯದ ಅಭಿಪ್ರಾಯ ಪಡೆಯದೇ ಹಾಗೂ ಈ ತಿದ್ದುಪಡಿ ಕಾಯಿದೆಯನ್ನು ಸದನದಲ್ಲಿ ಮುಂಡಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಟ್ವಿಟ್ಟರ್‌ ಮೂಲಕ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಏನಿದು ಎಪಿಎಂಸಿ ತಿದ್ದುಪಡಿ ಕಾಯಿದೆ? ಸುಗ್ರೀವಾಜ್ಞೆಯಲ್ಲೇನಿದೆ? ಇಲ್ಲಿದೆ ಕಂಪ್ಲೀಟ್‌ ವಿವರ

ಎಪಿಎಂಸಿ ಕಾಯಿದೆ ತಿದ್ದುಪಡಿಗೆ ವಿರೋಧ ಪಕ್ಷಗಳಿಂದಲೂ ಭಾರೀ ವಿರೋಧ ವ್ಯಕ್ತವಾಗಿದೆ. ಎಪಿಎಂಸಿ ಕಾಯಿದೆಗೆ ತಿದ್ದುಪಡಿಯಿಂದ ಬಂಡವಾಳಶಾಹಿಗಳಿಗೆ ಮತ್ತು ಕಾರ್ಪೊರೇಟ್‌ ವಲಯದ ಬಹುರಾಷ್ಟ್ರೀಯ ಕಂಪನಿಗಳಿಗೆ ಮಾತ್ರ ಅನುಕೂಲವಾಗಲಿದೆ. ಇದರಿಂದ ಎಪಿಎಂಸಿ ಮಾರುಕಟ್ಟೆಗಳು ದುರ್ಬಲವಾಗಲಿವೆ ಎಂಬುದು ವಿರೋಧ ಪಕ್ಷಗಳ ವಾದವಾಗಿದೆ.

ಎಪಿಎಂಸಿ ತಿದ್ದುಪಡಿ ಕಾಯಿದೆ: ಕೇಂದ್ರಕ್ಕೆ ಸೆಡ್ಡು ಹೊಡೆಯುವರೇ ಬಿಎಸ್‌ವೈ?

ಎಪಿಎಂಸಿ ಕಾಯಿದೆ ತಿದ್ದುಪಡಿಯಿಂದ ರೈತರಿಗೆ ಪೆಟ್ಟು ಬೀಳಲಿದ್ದು, ಮಾರುಕಟ್ಟೆಯಲ್ಲಿ ಏಕಸ್ವಾಮ್ಯ ಪದ್ಧತಿ ಜಾರಿಗೆ ಬರುವ ಮೂಲಕ ರೈತರ ಕಾರ್ಪೊರೇಟ್‌ ಕಂಪನಿಗಳ ಕಪಿಮುಷ್ಠಿಗೆ ಸಿಲುಕುವ ಆತಂಕ ಎದುರಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ