ಆ್ಯಪ್ನಗರ

ಗ್ರಾಮ ವಾಸ್ತವ್ಯ ಮಾಡಲು ಮಾನವೀಯ ಕಳಕಳಿ, ಅಂತಃಕರಣ ಇರಬೇಕು: ಬಿಜೆಪಿ ನಾಯಕರಿಗೆ ಸಿಎಂ ಟಾಂಗ್‌

ಜೂನ್‌ 21ರಂದು ಗ್ರಾಮ ವಾಸ್ತವ್ಯ ಮಾಡುವುದಾಗಿ ಘೋಷಣೆ ಮಾಡಿದ ಕೂಡಲೇ ಬಿಜೆಪಿಯ ಬಿಎಸ್‌ ಯಡಿಯೂರಪ್ಪ ಟೀಕಿಸಿದ್ದರು.

Vijaya Karnataka Web 4 Jun 2019, 8:41 pm
ಬೆಂಗಳೂರು: ಗ್ರಾಮ ವಾಸ್ತವ್ಯ ಮಾಡಲು ಮಾನವೀಯ ಕಳಕಳಿ, ನೈಜ ಅಂತಃಕರಣ ಇರಬೇಕು. ಗ್ರಾಮ ವಾಸ್ತವ್ಯ ಘೋಷಣೆಗೆ ಜನರಿಂದ ದೊರೆತ ಸ್ಪಂದನೆಯೇ ಬಿಜೆಪಿ ನಾಯಕರಿಗೆ ಉತ್ತರ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ಈ ಕುರಿತು ಟ್ವೀಟ್‌ ಮೂಲಕ ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಜೂನ್‌ 21ರಂದು ಗ್ರಾಮ ವಾಸ್ತವ್ಯ ಮಾಡುವುದಾಗಿ ಘೋಷಣೆ ಮಾಡಿದಾಗ ಬಿಜೆಪಿಯ ಬಿಎಸ್‌ ಯಡಿಯೂರಪ್ಪ ಟೀಕಿಸಿದ್ದರು.


ಒಂದು ವರ್ಷದಿಂದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿದ್ದವರು ಈಗ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಹೊರಬಂದಿದ್ದಾರೆ ಎಂದು ಟೀಕಿಸಿದ್ದರು.

ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಶ್ರೀರಾಮುಲು ಸೇರಿದಂತೆ ಹಲವಾರು ಬಿಜೆಪಿ ನಾಯಕರು ಸಿಎಂ ಗ್ರಾಮ ವಾಸ್ತವ್ಯ ಬಗ್ಗೆ ಟೀಕಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ