ಅಂಗಡಿ ನಿಧನದಿಂದ ರಾಜ್ಯದ ಅಭಿವೃದ್ಧಿ ಮಾರ್ಗವೊಂದು ಕಡಿತಗೊಂಡಿದೆ: ಎಚ್ಡಿಕೆ
'ಕೇಂದ್ರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ರಾಜ್ಯದ ರೈಲ್ವೆ ಸಾರಿಗೆ ಅಭಿವೃದ್ದಿಯ ಕನಸುಗಳನ್ನು ಹೊಂದಿದ್ದರು. ದುರಾದೃಷ್ಟವಶಾತ್ ಕೊರೊನಾ ಸೋಂಕಿನಿಂದ ನಮ್ಮನ್ನಗಲಿದ್ದಾರೆ' - ಸುರೇಶ್ ಅಂಗಡಿ ನಿಧನಕ್ಕೆ ಕುಮಾರಸ್ವಾಮಿ ಕಂಬನಿ
Vijaya Karnataka Web 23 Sep 2020, 10:04 pm
ಹೈಲೈಟ್ಸ್:
- ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸಂತಾಪ
- ಸುರೇಶ್ ಅಂಗಡಿ ನಿಧನ ದಿಗ್ಭ್ರಮೆ ಉಂಟುಮಾಡಿದೆ ಎಂದ ಎಚ್ಡಿಕೆ
- ರಾಜ್ಯದ ರೈಲ್ವೆ ಸಾರಿಗೆ ಅಭಿವೃದ್ದಿಯ ಕನಸುಗಳನ್ನು ಹೊಂದಿದ್ದರು ಎಂದು ಸ್ಮರಣೆ
ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಪ್ರಧಾನಿ ಮೋದಿಯವರಿಂದ ಹಿಡಿದು ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಸಂತಾಪ ಸೂಚಿಸುತ್ತಿದ್ದಾರೆ. ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಅವರೂ ಸುರೇಶ್ ಅಂಗಡಿ ನಿಧನಕ್ಕೆ ಕಂಬನಿ ಮಿಡಿದಿದ್ಧಾರೆ.
ಬೆಳಗಾವಿ ಸಂಸದರು, ಕೇಂದ್ರ ರೈಲ್ವೆ ರಾಜ್ಯ ಸಚಿವರೂ ಆದ ಸುರೇಶ್ ಅಂಗಡಿ ಅವರು ವಿಧಿವಶರಾದದ್ದು ತೀವ್ರ ದಿಗ್ಭ್ರಮೆಯನ್ನುಂಟು ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ: ದಿಲ್ಲಿ ಏಮ್ಸ್ನಲ್ಲಿ ವಿಧಿವಶ
ಸತತ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಅವರು ಈ ಬಾರಿ ಕೇಂದ್ರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ರಾಜ್ಯದ ರೈಲ್ವೆ ಸಾರಿಗೆ ಅಭಿವೃದ್ದಿಯ ಕನಸುಗಳನ್ನು ಹೊಂದಿದ್ದರು. ದುರಾದೃಷ್ಟವಶಾತ್ ಕೊರೊನಾ ಸೋಂಕಿನಿಂದ ನಮ್ಮನ್ನಗಲಿದ್ದಾರೆ ಎಂದಿರುವ ಕುಮಾರಸ್ವಾಮಿ, ರಾಜ್ಯದ ಅಭಿವೃದ್ಧಿಯ ಮಾರ್ಗವೊಂದು ಕಡಿತಗೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ಧಾರೆ.
ಪಕ್ಷ ಅಸಾಧಾರಣ ಕಾರ್ಯಕರ್ತನನ್ನು ಕಳೆದುಕೊಂಡಿದೆ: ಸುರೇಶ್ ಅಂಗಡಿ ನಿಧನಕ್ಕೆ ಮೋದಿ ಕಂಬನಿ!
ಸುರೇಶ್ ಅಂಗಡಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಎಂದಿರುವ ಮಾಜಿ ಸಿಎಂ ಕುಮಾರಸ್ವಾಮಿ, ಅಂಗಡಿ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಬೆಳಗಾವಿ ಐಟಿ ಕಚೇರಿ ಸ್ಥಳಾಂತರ ಬೇಡ; ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ
ಬೆಳಗಾವಿ ಸಂಸದರು, ಕೇಂದ್ರ ರೈಲ್ವೆ ರಾಜ್ಯ ಸಚಿವರೂ ಆದ ಸುರೇಶ್ ಅಂಗಡಿ ಅವರು ವಿಧಿವಶರಾದದ್ದು ತೀವ್ರ ದಿಗ್ಭ್ರಮೆಯನ್ನುಂಟು ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ: ದಿಲ್ಲಿ ಏಮ್ಸ್ನಲ್ಲಿ ವಿಧಿವಶ
ಸತತ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಅವರು ಈ ಬಾರಿ ಕೇಂದ್ರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ರಾಜ್ಯದ ರೈಲ್ವೆ ಸಾರಿಗೆ ಅಭಿವೃದ್ದಿಯ ಕನಸುಗಳನ್ನು ಹೊಂದಿದ್ದರು. ದುರಾದೃಷ್ಟವಶಾತ್ ಕೊರೊನಾ ಸೋಂಕಿನಿಂದ ನಮ್ಮನ್ನಗಲಿದ್ದಾರೆ ಎಂದಿರುವ ಕುಮಾರಸ್ವಾಮಿ, ರಾಜ್ಯದ ಅಭಿವೃದ್ಧಿಯ ಮಾರ್ಗವೊಂದು ಕಡಿತಗೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ಧಾರೆ.
ಪಕ್ಷ ಅಸಾಧಾರಣ ಕಾರ್ಯಕರ್ತನನ್ನು ಕಳೆದುಕೊಂಡಿದೆ: ಸುರೇಶ್ ಅಂಗಡಿ ನಿಧನಕ್ಕೆ ಮೋದಿ ಕಂಬನಿ!
ಸುರೇಶ್ ಅಂಗಡಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಎಂದಿರುವ ಮಾಜಿ ಸಿಎಂ ಕುಮಾರಸ್ವಾಮಿ, ಅಂಗಡಿ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಬೆಳಗಾವಿ ಐಟಿ ಕಚೇರಿ ಸ್ಥಳಾಂತರ ಬೇಡ; ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ