ಆ್ಯಪ್ನಗರ

ಬಸ್ ಪ್ರಯಾಣ ದರ ಏರಿಕೆ: ಸೂಕ್ತ ಸಮರ್ಥನೆ ಒದಗಿಸಲು ಮುಖ್ಯಮಂತ್ರಿ ಸೂಚನೆ

ಬಿಎಂಟಿಸಿಯನ್ನು ಸಂಪೂರ್ಣ ಡಿಜಿಟೈಸ್ ಮಾಡಲು ಕ್ರಮ ಕೈಗೊಳ್ಳಬೇಕಿದೆ ಎಂದು ಬಿಎಂಟಿಸಿ ಅಧ್ಯಕ್ಷ ಎನ್.ಎ.ಹ್ಯಾರಿಸ್ ತಿಳಿಸಿದರು.

Vijaya Karnataka Web 24 Jun 2019, 9:00 pm
ಬೆಂಗಳೂರು: ಬಸ್ ದರ ಏರಿಕೆ ಅನಿವಾರ್ಯತೆ ಕುರಿತಂತೆ ಸೂಕ್ತ ಸಮರ್ಥನೆಗಳೊಂದಿಗೆ ಮರು ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ಸೋಮವಾರ ನಡೆದ ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಡಿಸೇಲ್ ಬೆಲೆ ಹೆಚ್ಚಾಗಿದ್ದರೂ, ಕಳೆದ ನಾಲ್ಕು ವರ್ಷಗಳಿಂದ ಬಸ್ ದರವನ್ನು ಹೆಚ್ಚಿಸದೇ ಇರುವ ಹಿನ್ನೆಲೆಯಲ್ಲಿ ಬಸ್ ದರವನ್ನು ಏರಿಸಬೇಕೆಂಬ ಸಾರಿಗೆ ಇಲಾಖೆ ಪ್ರಸ್ತಾವನೆಯ ಕುರಿತು ಸಭೆಯಲ್ಲಿ ಚರ್ಚಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕೆಲ ಸೂಚನೆ ನೀಡಿದರು.

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತಷ್ಟು ಜನಸ್ನೇಹಿಯಾಗಬೇಕು. ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಹಾಗೂ ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕಲ್ ಬಸ್ ಗಳನ್ನು ಪರಿಚಯಿಸುವ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಗಾರ್ಮೆಂಟ್ ಕಾರ್ಖಾನೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಬಸ್ ಗಳನ್ನು ಬಳಸಿಕೊಳ್ಳಲು ಕಾರ್ಮಿಕ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಕಾರ್ಮಿಕರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸಲು ಬಸ್ ಪಾಸ್ ಗಳನ್ನು ರಿಯಾಯತಿ ದರದಲ್ಲಿ ನೀಡಲಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಬಿಎಂಟಿಸಿಯನ್ನು ಸಂಪೂರ್ಣ ಡಿಜಿಟೈಸ್ ಮಾಡಲು ಕ್ರಮ ಕೈಗೊಳ್ಳಬೇಕಿದೆ ಎಂದು ಬಿಎಂಟಿಸಿ ಅಧ್ಯಕ್ಷ ಎನ್.ಎ.ಹ್ಯಾರಿಸ್ ತಿಳಿಸಿದರು.

ಹೊಸ ಬಸ್ ಖರೀದಿ, ಹೊಸ ಬಸ್ ನಿಲ್ದಾಣ/ ಡಿಪೋಗಳ ನಿರ್ಮಾಣ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಾರಿಗೆ ಸಚಿವ ಡಿ.ಸಿ. ತಮಣ್ಣ, ಉನ್ನತ ಶಿಕ್ಷಣ ಸಚಿವ ಜಿ ಟಿ. ದೇವೇಗೌಡ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ