ಆ್ಯಪ್ನಗರ

ಪ್ರಜಾಪ್ರಭುತ್ವ ಉಳಿಸಲು ಸಾಂವಿಧಾನಿಕ ಸಂಸ್ಥೆಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು: ಸುಪ್ರೀಂ ತೀರ್ಪಿನ ಬಗ್ಗೆ ಕುಮಾರಸ್ವಾಮಿ ಅಸಮಾಧಾನ

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆ, ಸಾಂವಿಧಾನಿಕ ವ್ಯವಸ್ಥೆಯ ಬಗ್ಗೆಯೂ ಕುಮಾರಸ್ವಾಮಿ ಮಾತನ್ನಾಡಿದ್ದಾರೆ.

TIMESOFINDIA.COM 13 Nov 2019, 4:52 pm
ಬೆಂಗಳೂರು: ಅನರ್ಹ ಶಾಸಕರ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Vijaya Karnataka Web kumaraswamy..


ಜನತಾ ನ್ಯಾಯಾಲಯದಲ್ಲೂ 'ಅನರ್ಹ'ರು ಗೆಲ್ತಾರಾ? 'ಅನರ್ಹ'ರ ಗೆಲುವೇ ಸರ್ಕಾರದ ಗೆಲುವು!

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಲು ಸಾಂವಿಧಾನಿಕ ಸಂಸ್ಥೆಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾನು ವಿನಂತಿಸುತ್ತೇನೆ. ಭವಿಷ್ಯದಲ್ಲಿ ಅಂತವುಗಳು ಮತ್ತೆ ಸಂಭವಿಸದಂತೆ ಅವರು ಖಚಿತಪಡಿಸಿಕೊಳ್ಳಬೇಕು. ಕೆಲವು ರಾಜಕೀಯ ನಾಯಕರು ತಮ್ಮ ವೈಯಕ್ತಿಕ ಲಾಭಕ್ಕಾಗಿ ನಮ್ಮ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ತೀರ್ಪಿನ ಬಗ್ಗೆ ನಾನು ಸಂಪೂರ್ಣವಾಗಿ ಸಂತೋಷವಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್‌ಐಗೆ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕುಮಾರಸ್ವಾಮಿ ಹೇಳಿದ್ದಾರೆ.


ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ ಸುಪ್ರೀಂಕೋರ್ಟ್: ಸೋತು ಗೆದ್ದ ಅನರ್ಹರು!

17 ಶಾಸಕರು ಅನರ್ಹರು ಎಂದು ಅಂದಿನ ಸ್ಪೀಕರ್ ರಮೇಶ್‌ ಕುಮಾರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಆದರೆ, ಮುಂಬರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ.

ಶಾಸಕ ಸ್ಥಾನವೂ ಇಲ್ಲ, ಉಪಚುನಾವಣೆಯೂ ಇಲ್ಲ; ತ್ರಿಶಂಕು ಸ್ಥಿತಿಯಲ್ಲಿ ಮುನಿರತ್ನ, ಪ್ರತಾಪ್‌ಗೌಡ ಪಾಟೀಲ್‌

ಅಲ್ಲದೆ, ಬಿಜೆಪಿಗೆ ಜೆಡಿಎಸ್‌ ಬೆಂಬಲ ನೀಡುತ್ತಾ ಎಂದು ಕೇಳಿದ್ದಕ್ಕೆ, ಅವರ ಪಕ್ಷಗಳನ್ನು ರಕ್ಷಿಸುವುದಾಗಿ ನಾನು ಯಾರಿಗೂ ಭರವಸೆ ನೀಡಿಲ್ಲ. ನನ್ನ ಪಕ್ಷವಿದೆ. ಅದನ್ನು ಬಲಪಡಿಸುವುದು ನನ್ನ ಆದ್ಯತೆಯಾಗಿದೆ. ನಾನು ಬೇರೆ ಪಕ್ಷವನ್ನು ಯಾಕೆ ಬೆಂಬಲಿಸಬೇಕು ಅಥವಾ ರಕ್ಷಿಸಬೇಕು? ಅದರ ಅವಶ್ಯಕತೆ ಏನು? ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮ ತಪ್ಪು ಏನೇ ಇರಲಿ ಪ್ರಾದೇಶಿಕ ಪಕ್ಷಗಳನ್ನು ದೂಷಿಸುತ್ತವೆ. ಈ ರಾಜಕೀಯ ವ್ಯವಸ್ಥೆಯಲ್ಲಿ, ಅವರು ಯಾವಾಗಲೂ ಇನ್ನೊಂದು ಬದಿಯನ್ನು ದೂಷಿಸಲು ಬಯಸುತ್ತಾರೆ. ಪ್ರಾದೇಶಿಕ ಪಕ್ಷಗಳೊಂದಿಗೆ ಆಟವಾಡಬೇಡಿ ಎಂದು ಮಾಜಿ ಸಿಎಂ ಹೇಳಿಕೊಂಡಿದ್ದಾರೆ.

ಸ್ಪೀಕರ್‌ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌; ಅನರ್ಹರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ

ಅಲ್ಲದೆ, ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಮಾಜಿ ಸಿಎಂ, ಜೆಡಿಎಸ್‌ ಅನ್ನು ಬಿಜೆಪಿಯ ಬಿ - ಟೀಂ ಎಂದು ಘೋಷಿಸುವಂತೆ ಸಿದ್ದರಾಮಯ್ಯ ರಾಹುಲ್‌ ಗಾಂಧಿಗೆ ಮನವಿ ಮಾಡಿಕೊಂಡಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ