ಆ್ಯಪ್ನಗರ

ಸಿಎಂ ಗ್ರಾಮ ವಾಸ್ತವ್ಯ: ಯಾದಗಿರಿಗೆ ಆಗಮಿಸಿದ ಎಚ್ ಡಿಕೆ

ಸಿಎಂ ಕುಮಾರಸ್ವಾಮಿ ಜನತಾ ದರ್ಶನ ನಡೆಸವರು. ಇದಾದ ಮೇಲೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆ ಮೇಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡುವರು.

Vijaya Karnataka Web 21 Jun 2019, 7:28 am
ಯಾದಗಿರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಹೂಡುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಾಲ್ಕರ ಸುಮಾರಿಗೆ ಯಾದಗಿರಿಗೆ ಆಗಮಿಸಿದರು.
Vijaya Karnataka Web ಕುಮಾರಸ್ವಾಮಿ
ಕುಮಾರಸ್ವಾಮಿ


ನಗರದ ರೈಲು ನಿಲ್ದಾಣ ಆಗಮಿಸಿದ ಹಿನ್ನೆಲೆಯಲ್ಲಿ ಅವರಿಗೆ ಸ್ವಾಗತ ಕೋರಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಮತ್ತು ಜಿಲ್ಲಾಧಿಕಾರಿ ಕೂರ್ಮಾರಾವ್ ಅವರನ್ನು ಬರ ಮಾಡಿಕೊಂಡರು.

ಸಿಎಂ ಈಗ ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಗುರುಮಠಕಲ್ ತಾಲೂಕಿನ ಚಂಡ್ರಕಿ ಗ್ರಾಮದಲ್ಲಿ ಸಿಎಂ ಅವರು ಗ್ರಾಮ ವಾಸ್ತವ್ಯ ಹೂಡುತ್ತಿದ್ದಾರೆ. ಹಳ್ಳಿಯಲ್ಲಿ ಈಗಾಗಲೇ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಬೆಳಗ್ಗೆ ಹತ್ತರಿಂದ ಸಂಜೆ ಆರರವರೆಗೆ ಸಿಎಂ ಅವರು ಜನತಾ ದರ್ಶನ ನಡೆಸವರು. ಇದಾದ ಮೇಲೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆ ಮೇಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಸ್ತವ್ಯ ಹೂಡುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ