ಆ್ಯಪ್ನಗರ

ಯಾರ ಹಂಗೂ ಇಲ್ಲ, ಯಾರೂ ಭಿಕ್ಷೆ ಕೊಟ್ಟಿಲ್ಲ: ಬಜೆಟ್ ಬಗ್ಗೆ ಸಿಎಂ ಹೇಳಿಕೆ

ನಾನು ಯಾರ ಹಂಗಿನಲ್ಲಿ ಇಲ್ಲ. ನನಗೆ ಯಾರೂ ಭಿಕ್ಷೆ ಕೊಟ್ಟಿಲ್ಲ ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ.

Vijaya Karnataka Web 25 Jun 2018, 2:24 pm
ಬೆಂಗಳೂರು: ನಾನು ಯಾರ ಹಂಗಿನಲ್ಲಿ ಇಲ್ಲ. ನನಗೆ ಯಾರೂ ಭಿಕ್ಷೆ ಕೊಟ್ಟಿಲ್ಲ. ಸಾಲಮನ್ನಾದಲ್ಲಿ ಏನು ಬೇಕೋ ಅದನ್ನ ಮಾಡುತ್ತೇನೆ ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ.
Vijaya Karnataka Web hdk comments on budget and replies to siddaramaiah
ಯಾರ ಹಂಗೂ ಇಲ್ಲ, ಯಾರೂ ಭಿಕ್ಷೆ ಕೊಟ್ಟಿಲ್ಲ: ಬಜೆಟ್ ಬಗ್ಗೆ ಸಿಎಂ ಹೇಳಿಕೆ


ಸೋಮವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮನ್ನಾ ಯೋಜನೆ ಜಾರಿಗೆ ಹಲವಾರು ರೀತಿಯ ಮಾಹಿತಿ ಪಡೆಯಲು ಪ್ರಯತ್ನ ಪಡುತ್ತಿದ್ದೇನೆ. ಸಮ್ಮಿಶ್ರ ಸರಕಾರದಲ್ಲಿ ಯಾವ ತರ ಕೆಲಸ ಮಾಡಬೇಕು ಎಂದು ತಿಳಿದಿದೆ. ಕೆಲವೊಂದನ್ನು ನಾನು ಹೊರಗಡೆ ಹೇಳುವುದಕ್ಕೆ ಆಗುವುದಿಲ್ಲ. ನನಗೆ ಬೇರೆಯವರಂತೆ ಗಡುಸು ದನಿಯಲ್ಲಿ ಮಾತನಾಡಿ, ದರ್ಪದಿಂದ ಮಾತನಾಡುವುದಿಲ್ಲ. ಮೃದುವಾಗಿ ಯಾವ ರೀತಿ ಕೆಲಸ ಮಾಡಿಸಬೇಕು ಎಂಬುದು ತಿಳಿದಿದೆ ಎಂದು ಹೇಳಿದರು.

ನಾನು ಇಲ್ಲಿ ಯಾರ ಹಂಗಿನಲ್ಲೂ ಇಲ್ಲ. ಬಜೆಟ್ ಮಂಡನೆ ಬೇಕೆ ಬೇಡವೇ ಎಂಬ ಕುರಿತು ಚರ್ಚೆಯಾಗುತ್ತಿದೆ. ಕೆಲವರು ಲೋಕಸಭೆ ಚುನಾವಣೆ ಬಳಿಕ ಬಜೆಟ್ ಮಂಡನೆಗೆ ಸಲಹೆ ನೀಡಿದ್ದಾರೆ. ಆದರೆ ಆ ಬಳಿಕ ನಮ್ಮ ಸರಕಾರ ಇರುತ್ತದೆಯೇ ಇಲ್ಲವೇ ಎಂಬುದೇ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಹಿಂದಿನ ಸರಕಾರದ ಶಾಸಕರಾಗಿದ್ದ ನೂರು ಮಂದಿ ಸೋತಿದ್ದಾರೆ. ಅವರು ಅನುಮೋದಿಸಿದ ಬಜೆಟ್‌ನ್ನು ನಾನು ಅನುಮೋದನೆ ಮಾಡಿದರೆ, ಈಗ ಆಯ್ಕೆಯಾಗಿ ಬಂದವರಿಗೆ ಹಕ್ಕುಚ್ಯುತಿ ಆಗುವುದಿಲ್ಲವೇ? ಯಾರದರೂ ಹಕ್ಕು ಚ್ಯುತಿ ಮಂಡನೆ ಮಾಡಿದಲ್ಲಿ ಮುಂದೇನು ಎಂಬಿತ್ಯಾದಿ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ