ಆ್ಯಪ್ನಗರ

ಜಂತಕಲ್‌ ಕೇಸ್‌: ಜಾಮೀನು ಷರತ್ತು ಸಡಿಲಿಕೆಗೆ ಎಚ್‌ಡಿಕೆ ಮನವಿ

ಜಂತಕಲ್‌ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಷರತ್ತು ಸಡಿಲಿಕೆ ಕೋರಿ ಮುಖ್ಯಮಂತ್ರಿ ಎಚ್‌...

Vijaya Karnataka 16 Mar 2019, 5:00 am
ಬೆಂಗಳೂರು: ಜಂತಕಲ್‌ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಷರತ್ತು ಸಡಿಲಿಕೆ ಕೋರಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
Vijaya Karnataka Web hdk


ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡಿಕೆಯಲ್ಲಿ ಅಕ್ರಮ ನಡೆಸಲಾಗಿದೆ. ಅದರಲ್ಲಿ ಎಚ್‌.ಡಿ ಕುಮಾರಸ್ವಾಮಿ ಅವರು ಭಾಗಿಯಾಗಿದ್ದಾರೆ ಎಂಬ ಆರೋಪದ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ವಿಶೇಷ ತನಿಖಾ ದಳ (ಎಸ್‌ಐಟಿ) ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದಲ್ಲಿ ಕುಮಾರಸ್ವಾಮಿ ಸೇರಿದಂತೆ ಎಲ್ಲ ಆರೋಪಿಗಳು ಷರತ್ತುಬದ್ದ ಜಾಮೀನು ಪಡೆದಿದ್ದಾರೆ. ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳದಂತೆ ವಿಧಿಸಿರುವ ಷರತ್ತನ್ನು ಸಡಿಲಿಸುವಂತೆ ಕೋರಿ ಕುಮಾರಸ್ವಾಮಿ ಶುಕ್ರವಾರ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನ್ಯಾಯಾಲಯ ಮಾ.28ಕ್ಕೆ ಮುಂದೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ