ಆ್ಯಪ್ನಗರ

ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಬಿಟ್ಟು ಬಿಜೆಪಿ, ಎನ್‌ಡಿಎ ಕೂಟ ಸೇರಬೇಕು: ಅಠವಳೆ

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕುಮಾರಸ್ವಾಮಿ, ಕಣ್ಣೀರು ಹಾಕುತ್ತಿದ್ದಾರೆ. ಹೀಗಾಗಿ, ಅವರು ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಲಿ ಎಂದು ತಿಳಿಸಿದರು.

Vijaya Karnataka Web 15 Apr 2019, 2:02 pm
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ, ಎನ್‌ಡಿಎ ಮೈತ್ರಿ ಕೂಟ ಸೇರಬೇಕು ಎಂದು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಆರ್.ಪಿ.ಐ(ಎ) ನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ರಾಮದಾಸ್ ಅಠವಳೆ ಆಹ್ವಾನಿಸಿದ್ದಾರೆ.
Vijaya Karnataka Web athavale


ನಗರದಲ್ಲಿಂದು ಅರಮನೆ‌ ರಸ್ತೆಯ ಖಾಸಗಿ‌ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕುಮಾರಸ್ವಾಮಿ, ಕಣ್ಣೀರು ಹಾಕುತ್ತಿದ್ದಾರೆ. ಹೀಗಾಗಿ, ಅವರು ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಲಿ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿಕಾಸ ಪುರಷ. ಹತ್ತು ಹಲವು ಯೋಜನೆಗಳು ಜನರಿಗಾಗಿ ತಂದಿದ್ದಾರೆ.ಹೀಗಾಗಿ, ಕರ್ನಾಟಕ ಅಭಿವೃದ್ಧಿ ಆಗಬೇಕಾದರೆ, ಬಿಜೆಪಿ ಆಡಳಿತ ಬರಬೇಕು. ಈ‌ ನಿಟ್ಟಿನಲ್ಲಿ ಬಿಜೆಪಿ ಸೇರಬೇಕು ಎಂದು ನುಡಿದರು.

ಲೋಕಸಭಾ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರ, ಬೆಂಗಳೂರು ಗ್ರಾಮಾಂತರ, ಚಿಕ್ಕೋಡಿ ಕ್ಷೇತ್ರ ಹಾಗೂ ಬೆಳಗಾವಿ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತ್ತೆಲ್ಲ ಕಡೆ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಾಗುವುದು ಎಂದು ಪ್ರಕಟಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎರಡು ಲೋಕಸಭಾ ಕ್ಷೇತ್ರದಲ್ಲಿ ಆರ್ ಪಿಐ ಪಕ್ಷಕ್ಕೆ ಅವಕಾಶ ನೀಡುವಂತೆ ಬಿಜೆಪಿಗೆ ಕೇಳಲಾಗಿತ್ತು. ಆದರೆ, ಅವರು ನೀಡಿಲ್ಲ.ಹೀಗಾಗಿಯೇ, ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ.ಇನ್ನೂ, ಕೆಲ ಕ್ಷೇತ್ರಗಳ ಬಿಜೆಪಿ ಪರ ಪ್ರಚಾರ ನಡೆಸಲಾಗುವುದು ಎಂದು ತಿಳಿಸಿದರು.

ರಾಹುಲ್ ಗಾಂಧೀಜಿ ಅವರು, ಪ್ರಧಾನ ಮಂತ್ರಿ ಆಗುವ ಕನಸು ಕಾಣಬಾರದು.ಏಕೆಂದರೆ, ನರೇಂದ್ರ ಮೋದಿ ಇದುವರೆಗೂ ಅವರು ಪ್ರಧಾನಿ ಆಗಲು ಸಾಧ್ಯವಾಗಿಲ್ಲ. ಇನ್ನೂ, ಮಹಾಘಟಬಂದನ್ ಎನ್ನುವುದು ಬರೀ ಬಾಯಿ ಮಾತು.ಇದರಲ್ಲಿ ಎಲ್ಲರೂ, ಪ್ರಧಾನ ಮಂತ್ರಿ ಆಗುವ ಕನಸು ಕಾಣುತ್ತಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರಂತೆ ಸುಲಭವಾಗಿ ಆಗುವ ಉದಾಹರಣೆ ಇಟ್ಟುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಆರ್ ಪಿಐ ರಾಜ್ಯಾಧ್ಯಕ್ಷ ಎ.ವೆಂಕಟಸ್ವಾಮಿ, ಬಿಜೆಪಿ ವಕ್ತಾರ ಆನಂದ್, ವೈ.ಎಸ್.ದೇವು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ