ಆ್ಯಪ್ನಗರ

ಸರಕಾರದಿಂದ 2 ಸಾವಿರ ಕೋಟಿ ಮೌಲ್ಯದ ಅಕ್ರಮ ಅದಿರು ರಫ್ತು: ಎಚ್ಡಿಕೆ

ಮೈಸೂರು ಮಿನರಲ್ಸ್‌ ಸಂಸ್ಥೆ (ಎಂಎಂಎಲ್‌) ಮೂಲಕ ನಡೆದಿರುವ ಸುಮಾರು 2 ಸಾವಿರ ಕೋಟಿ ರೂ. ಮೌಲ್ಯದ 10 ಲಕ್ಷ ಮೆಟ್ರಿಕ್‌ ಟನ್‌ ಅದಿರು ಅಕ್ರಮ ರಫ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಸಧ್ಯದಲ್ಲಿಯೇ ಬಯಲಿಗೆಳೆಯುವುದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Vijaya Karnataka 15 Dec 2017, 8:44 am

ಬೆಂಗಳೂರು: ಮೈಸೂರು ಮಿನರಲ್ಸ್‌ ಸಂಸ್ಥೆ (ಎಂಎಂಎಲ್‌) ಮೂಲಕ ನಡೆದಿರುವ ಸುಮಾರು 2 ಸಾವಿರ ಕೋಟಿ ರೂ. ಮೌಲ್ಯದ 10 ಲಕ್ಷ ಮೆಟ್ರಿಕ್‌ ಟನ್‌ ಅದಿರು ಅಕ್ರಮ ರಫ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಸಧ್ಯದಲ್ಲಿಯೇ ಬಯಲಿಗೆಳೆಯುವುದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Vijaya Karnataka Web hdk to relase documents on dec 18th
ಸರಕಾರದಿಂದ 2 ಸಾವಿರ ಕೋಟಿ ಮೌಲ್ಯದ ಅಕ್ರಮ ಅದಿರು ರಫ್ತು: ಎಚ್ಡಿಕೆ


ಪಕ್ಷದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ಮಾತನಾಡಿದ ಅವರು ''ಸಿಎಂ ಸಿದ್ದರಾಮಯ್ಯ ಸರಕಾರದ ಈ ದೊಡ್ಡ ಹಗರಣದ ಬಗ್ಗೆ ಡಿ.18 ರ ಗುಜರಾತ್‌ ಚುನಾವಣೆ ಫಲಿತಾಂಶದ ಬಳಿಕ ದಾಖಲೆ ಬಹಿರಂಗ ಮಾಡುತ್ತೇನೆ. ಮುಖ್ಯಮಂತ್ರಿಗಳು ಈ ಬಗ್ಗೆ ರಾಜ್ಯದ ಜನರಿಗೆ ಉತ್ತರ ನೀಡಲೇಬೇಕಾಗುತ್ತದೆ'' ಎಂದು ತಿಳಿಸಿದರು.

''ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಸಂಘರ್ಷ ಸರಕಾರದ ವೈಫಲ್ಯಕ್ಕೆ ಸ್ಪಷ್ಟ ನಿದರ್ಶನ. ಉತ್ತರ ಪ್ರದೇಶದಲ್ಲಿ ಚುನಾವಣೆಗೆ ಕೆಲದಿನ ಮುನ್ನ ಮುಜಾಫರಾಬಾದ್‌ನಲ್ಲಿ ನಡೆದ ಘಟನೆಯಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಂಡರು. ಬಿಜೆಪಿ, ಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳು ಚುನಾವಣೆಗೆ ಮುನ್ನ ಅಂತದ್ದೇ ಸ್ಥಿತಿಯನ್ನು ರಾಜ್ಯದಲ್ಲಿ ಸೃಷ್ಟಿ ಮಾಡಲು ಪ್ರಯತ್ನಿಸುತ್ತಿರುವ ಆತಂಕ ಮೂಡಿದೆ'' ಎಂದರು.

''ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕನ್ನಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲೇ ಕೋಮು ಸಂಘರ್ಷ ಸೃಷ್ಟಿಯಾಗಿ, ಅದು ವಿಸ್ತರಿಸುತ್ತಾ ಹೋಯಿತು. ಆದರೆ, ಸಿಎಂ ಈ ಕುರಿತು ಪ್ರತಿಕ್ರಿಯೆಯನ್ನೇ ನೀಡದೆ ಒಂದಿಡೀ ವಾರ ಮೌನ ವಹಿಸಿದ್ದರು. ಮೊದಲ ಹಂತದಲ್ಲೇ ಗಲಭೆಯನ್ನು ನಿಯಂತ್ರಿಸಲು ಸಾಧ್ಯವಿತ್ತು. ಆದರೂ ಸರಕಾರ ನಿರ್ಲಕ್ಷ್ಯ ವಹಿಸಿದ್ದು ಏಕೆ'' ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ