ಆ್ಯಪ್ನಗರ

ಬೇಡಿಕೆಗಳಿಗೆ ರಾಜ್ಯ ಸರ್ಕಾರ ಅಸ್ತು, ಮುಷ್ಕರ ಕೈಬಿಡಲು ವೈದ್ಯರ ಒಪ್ಪಿಗೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದ ವೈದ್ಯರ ಜೊತೆಗಿನ ಸಂಧಾನ ಯಶಸ್ವಿಯಾಗಿದ್ದು ವೈದ್ಯರ ಸಂಘಟನೆಗಳು ಮುಷ್ಕರ ವಾಪಸ್‌ ಪಡೆಯಲು ಸಮ್ಮತಿ ಸೂಚಿಸಿವೆ. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 18 Sep 2020, 3:36 pm
ಬೆಂಗಳೂರು: ವೇತನ ಪರಿಷ್ಕರಣೆಗೆ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ವೈದ್ಯರು ಸೆಪ್ಟಂಬರ್ 15 ರಿಂದ ಅಸಹಕಾರ ಚಳುವಳಿ ಆರಂಭಿಸಿದ್ದು ಇದೀಗ ಕೊನೆಗೂ ಸುಖಾಂತ್ಯ ಕಂಡಿದೆ. ಸೆ. 21 ರಿಂದ ಒಪಿಡಿ ಬಂದ್ ಮಾಡಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದ ವೈದ್ಯರ ಜೊತೆಗೆ ಆರೋಗ್ಯ ಸಚಿವ ಶ್ರೀರಾಮುಲು ಮಾತುಕತೆ ನಡೆಸಿ ವೈದ್ಯರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ್ದಾರೆ.
Vijaya Karnataka Web sriramulu


ವೈದ್ಯರ ವೇತನ ಪರಿಷ್ಕರಣೆ ಬೇಡಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದು ಪರಿಣಾಮ ಮುಷ್ಕರ ಕೈಬಿಡಲು ವೈದ್ಯ ಸಂಘಟನೆಗಳು ಒಪ್ಪಿಗೆ ಸೂಚಿಸಿವೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು ಜನಸಾಮಾನ್ಯರ ಹಿತ ಕಾಪಾಡಲು ಸರ್ಕಾರ ಯಾವತ್ತೂ ಬದ್ಧ ಎಂದಿದ್ದಾರೆ.

ವೈದ್ಯಾಧಿಕಾರಿಗಳ ಜೊತೆ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಸಭೆ, ಕಾಂಗ್ರೆಸ್ ಕಿಡಿ

ಪ್ರತಿಭಟನಾ ನಿರತ ವೈದ್ಯರ ಜತೆ ನಡೆಸಿದ ಸಭೆ ಯಶಸ್ವಿಯಾಗಿದೆ. ವೈದ್ಯರ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಗೆ ನೀಡಲಾಗಿದೆ. ಈ ಐತಿಹಾಸಿಕ ನಿರ್ಧಾರಕ್ಕೆ ಕಾರಣೀಭೂತರಾದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಹಾಗೆಯೇ, ಮುಷ್ಕರವನ್ನು ಕೈಬಿಟ್ಟ ವೈದ್ಯರಿಗೂ ಸರ್ಕಾರದ ಪರವಾಗಿ ಅಭಿನಂದನೆಗಳು. ಜನಸಾಮಾನ್ಯರ ಹಿತ ಕಾಪಾಡಲು ಸರ್ಕಾರ ಯಾವತ್ತೂ ಬದ್ಧವಾಗಿದ್ದು, ಕೋವಿಡ್ ಸಂಬಂಧಿತ ಸೇವೆಗಳು ಅಭಾದಿತವಾಗಿ ಮುಂದುವರಿಯಲಿವೆ ಎಂದು ಟ್ವೀಟ್ ಮಾಡಿದ್ದಾರೆ.

ವೈದ್ಯರ ಪ್ರತಿಭಟನೆ: ಸಂಧಾನಕ್ಕೆ ಮುಂದಾದ ಶ್ರೀರಾಮುಲು

ಪ್ರತಿಭಟನಾ ನಿರತ ವೈದ್ಯರ ಜೊತೆಗೆ ಆರೋಗ್ಯ ಸಚಿವ ಶ್ರೀರಾಮುಲು ಮಂಗಳವಾರ ಸಭೆ ನಡೆಸಿದ್ದರು. ಆದರೆ ಇದು ಯಶಸ್ವಿ ಆಗಿರಲಿಲ್ಲ. ತಮ್ಮ ಬೇಡಿಕೆ ಈಡೇರದೆ ಇದ್ದರೆ ರಾಜ್ಯಾದ್ಯಂತ ಸೆಪ್ಟಂಬರ್ 21 ರಂದು ಬೆಂಗಳೂರು ಚಲೋ ಜಾಥಾ ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ವೈದ್ಯರು ನೀಡಿದ್ದರು. ಇದೀಗ ಕೊನೆಗೂ ಸಂದಾನ ಯಶಸ್ವಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ