ಆ್ಯಪ್ನಗರ

ಕೋವಿಡ್ ಆತಂಕ: ಆಸ್ಪತ್ರೆಗೆ ದಾಖಲಾಗಿರುವ ಬಿಎಸ್‌ವೈ, ಸಿದ್ದರಾಮಯ್ಯ ಆರೋಗ್ಯ ಹೇಗಿದೆ?

ಕೋವಿಡ್‌ ಪಾಸಿಟಿವ್ ಆಗಿರುವ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Vijaya Karnataka Web 6 Aug 2020, 9:16 am
ಬೆಂಗಳೂರು: ಕೋವಿಡ್‌ ಸೋಂಕು ಪಾಸಿಟಿವ್‌ ಆಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೋವಿಡ್‌ ರೋಗ ಲಕ್ಷಣಗಳು ಇಲ್ಲದೇ ಇದ್ದರೂ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
Vijaya Karnataka Web bsy and siddaramaiah


ಆಸ್ಪತ್ರೆಯ ಅಧಿಕೃತ ಮಾಹಿತಿ ಪ್ರಕಾರ ಇಬ್ಬರು ನಾಯಕರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ. ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಭಾನುವಾರ ರಾತ್ರಿ ಕೋವಿಡ್‌ ಇರುವುದು ದೃಢಪಟ್ಟಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.

ರಾಮ ಮಂದಿರ ಶಿಲಾನ್ಯಾಸದ ವೇಳೆ ಅವರ ಮುಖದಲ್ಲಿ ದಿವ್ಯಾನುಭೂತಿ ಕಂಡೆ: ನಿರ್ಮಲಾನಂದನಾಥ ಸ್ವಾಮೀಜಿ

ಸಿದ್ದರಾಮಯ್ಯ ಅವರಿಗೆ ಸೋಮವಾರ ಜ್ವರ ಕಾಣಿಸಿಕೊಂಡಿತ್ತು. ವೈದ್ಯರ ಸಲಹೆಯ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾದರು. ಆಸ್ಪತ್ರೆಯಲ್ಲಿ ಕೋವಿಡ್‌ ತಪಾಸಣೆಯ ಬಳಿಕ ಕೋವಿಡ್‌ ಇರುವುದು ದೃಢಪಟ್ಟಿತ್ತು.

ರಾಜ್ಯದಲ್ಲಿ ಮುಂದುವರೆದ ಕೊರೊನಾ ಹಾವು-ಏಣಿ ಆಟ..! 5,000+ ಪಾಸಿಟಿವ್‌; 1.5 ಲಕ್ಷ ದಾಟಿದ ಸೋಂಕು

ಆದರೆ ಇದೀಗ ಜ್ವರದಿಂದ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದಾರೆ. ಅಲ್ಲದೆ ಮೂತ್ರಕೋಶದ ಸೋಂಕು ಕೂಡಾ ಕಡಿಮೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಿದ್ದರೂ ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಯಾವುದೇ ರೋಗಲಕ್ಷಣಗಳು ಅವರಲ್ಲಿ ಕಂಡುಬಂದಿಲ್ಲ.

ಬಿಎಸ್‌ವೈ ಹಾಗೂ ಸಿದ್ದರಾಮಯ್ಯ ನಗರದ ಮಣಿಪಾಲ್‌ ಆಸ್ಪತ್ರೆಯ 11 ನೇ ಮಹಡಿಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೋವಿಡ್‌ ಇರುವ ಹಿನ್ನೆಲೆಯಲ್ಲಿ ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ