ಆ್ಯಪ್ನಗರ

ಆರೋಗ್ಯ ವ್ಯವಸ್ಥೆ ಗೊಂದಲ ನಿವಾರಣೆಗೆ ಸಿಎಂ ಸಭೆ

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಆವರಿಸಿರುವ ಗೊಂದಲ ನಿವಾರಿಸುವ ಸಂಬಂಧ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

Vijaya Karnataka Web 30 May 2018, 9:08 am
ಬೆಂಗಳೂರು : ಸರ್ವರಿಗೂ ಆರೋಗ್ಯ ಭಾಗ್ಯದ ಯೂನಿವರ್ಸಲ್‌ ಹೆಲ್ತ್‌ ಸ್ಕೀಂ ಪರಿಣಾಮಕಾರಿ ಜಾರಿಯಾಗದೆ, ಹಿಂದಿನ ಯಶಸ್ವಿನಿ ಯೋಜನೆಯೂ ಮುಂದುವರಿಯದೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಆವರಿಸಿರುವ ಗೊಂದಲ ನಿವಾರಿಸುವ ಸಂಬಂಧ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
Vijaya Karnataka Web kumara 1


ಸಿಎಂ ಗೃಹ ಕಚೇರಿ 'ಕೃಷ್ಣಾ'ದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಜಯ್‌ಸೇಠ್‌, ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಮಂಜುನಾಥ್‌ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

ಒಟ್ಟಾರೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ ವಿಶೇಷವಾಗಿ ಬಡವರಿಗೆ ಅನುಕೂಲ ಕಲ್ಪಿಸಲು ಒತ್ತು ನೀಡುವ ಮಾಹಿತಿಯನ್ನು ಸೂಕ್ತ ತೀರ್ಮಾನಕ್ಕಾಗಿ ಸಚಿವ ಸಂಪುಟ ಸಭೆಯ ಮುಂದಿಡುವಂತೆ ಆರೋಗ್ಯ ಇಲಾಖೆ ಮುಖ್ಯಸ್ಥರಿಗೆ ಸಿಎಂ ಸೂಚನೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ