ಆ್ಯಪ್ನಗರ

ಕೋವಿಡ್‌ ಎರಡನೇ ಅಲೆ ಆತಂಕ: 15 ದಿನಗಳ ಕಾಲ ಕಠಿಣ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!

ಕೋವಿಡ್‌ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳುವ ಆತಂಕ ಎದುರಾಗಿದ್ದು ಇದನ್ನು ಎದುರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಜ್ಜಾಗುತ್ತಿದೆ. ಈ ವಿಚಾರವಾಗಿ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ನೀಡಿದ್ದು ಸರ್ಕಾರಕ್ಕೆ ಪ್ರಮುಖ ಶಿಫಾರಸುಗಳನ್ನು ಮಾಡಿದೆ.

Vijaya Karnataka Web 4 Dec 2020, 1:41 pm
ಬೆಂಗಳೂರು: ಕೋವಿಡ್‌ ಸೋಂಕಿನ ಎರಡನೇ ಅಲೆ ಜನವರಿ ತಿಂಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕೆಲವೊಂದು ಕಠಿಣ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ಜೊತೆಗೆ ಸಭೆ ನಡೆಸಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಬಳಿಕ ಸರ್ಕಾರದ ಮುಂದಿನ ನಡೆಯ ಕುರಿತಾಗಿ ಮಾಹಿತಿ ನೀಡಿದರು.
Vijaya Karnataka Web Dr K Sudhakar


ತಾಂತ್ರಿಕ ಸಲಹಾ ಸಮಿತಿ ಈ ಬಾರಿ ಹೊಸ ವರ್ಷದ ಆಚರಣೆ ಬೇಡ ಎಂದು ಸೂಚಿಸಿದೆ. ಜೊತೆಗೆ ಧಾರ್ಮಿಕ ಸಮಾರಂಭ, ಹಬ್ಬ ಹರಿದಿನಗಳಿಗೂ ಬ್ರೇಕ್‌ ಹಾಕುವಂತೆ ತಿಳಿಸಿದ್ದು ಡಿಸೆಂಬರ್‌ 20 ರಿಂದ ಜನವರಿ 2 ರ ವರೆದಿನ 15 ದಿನಗಳ ಕಾಲವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಶಿಫಾರಸು ಮಾಡಿದೆ ಎಂದು ಮಾಹಿತಿ ನೀಡಿದರು.

30 ಕೋಟಿ ಜನರಿಗೆ ಕೋವಿಡ್‌ ಲಸಿಕೆ! ಸನ್ನದ್ಧವಾಗಿರಲು ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ

ಡಿಸೆಂಬರ್‌ 20 ರಿಂದ ಜನವರಿ 2 ವರೆಗೆ ಎಲ್ಲಾ ರೀತಿಯ ಕಾರ್ಯಕ್ರಮ ಸಮಾರಂಭಗಳಿಗೆ ನಿಷೇಧ ಹೇರಬೇಕು ಎಂಬ ಸಲಹೆಯನ್ನು ಸಮಿತಿ ನೀಡಿದೆ. ಕೋವಿಡ್‌ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ಸದ್ಯ ನಿರಂತರ ಕೋವಿಡ್‌ ತಪಾಸಣೆಗಳನ್ನು ನಡೆಸುತ್ತಿದ್ದು ಜನವರಿ ಬಳಿಕವೂ ಟೆಸ್ಟ್ ಪ್ರಮಾಣ ಹೆಚ್ಚಳ ಮಾಡಲಾಗುವುದು, 1,25,000 ಟೆಸ್ಟ್‌ ಮಾಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ವಿದ್ಯಾರ್ಥಿಗಳಿಗೂ ಕಡ್ಡಾಯಗೊಳಿಸುವಂತೆ ತಿಳಿಸಿದೆ ಎಂದ ಅವರು ಶಾಲೆ ಹಾಗೂ ಪಿಯುಸಿ ಕಾಲೇಜು ಆರಂಭದ ಕುರಿತಾಗು ಡಿಸೆಂಬರ್‌ 3 ಅಥವಾ 4 ನೇ ವಾರದಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಜೊತೆಗೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ