ಆ್ಯಪ್ನಗರ

ಕೋವಿಡ್ ಸಂದರ್ಭದಲ್ಲಿ ಗ್ರಾಮೀಣ‌ ಪ್ರದೇಶದಲ್ಲಿ ಚುನಾವಣೆ ಸೂಕ್ತವಲ್ಲ, ಡಾ.ಕೆ.ಸುಧಾಕರ್

ಕೋವಿಡ್ ಸಾಂಕ್ರಾಮಿಕ ಸೋಂಕಿನ ಸಂದರ್ಭದಲ್ಲಿ ಗ್ರಾಮೀಣ‌ ಪ್ರದೇಶದಲ್ಲಿ ಚುನಾವಣೆ ಸೂಕ್ತವಲ್ಲ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ. ಕೆ ಸುಧಾಕರ್‌ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 28 Oct 2020, 10:43 am
ಬೆಂಗಳೂರು: ಕೋವಿಡ್ ಸೋಂಕಿನ ಸಂದರ್ಭದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್ ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
Vijaya Karnataka Web dr. k. sudhakar


ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಜನರು ಚುನಾವಣೆ ಮೂಲಕ ತಮ್ಮ ಸೇವೆ ಮಾಡುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಈ ರೀತಿ ಜನಾದೇಶದ ಮೂಲಕ ನಡೆಯುವ ವ್ಯವಸ್ಥೆ ಪ್ರಜೆಗಳ ಪರವಾಗಿರುತ್ತದೆ. ಆದರೆ ಈ ಸಂದರ್ಭದಲ್ಲಿ ಕೋವಿಡ್ ಮಹಾಮಾರಿಯಿಂದಾಗಿ ಎಲ್ಲ ಚಟುವಟಿಕೆಗಳಿಗೂ ಅಡ್ಡಿಯಾಗಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದರೆ ಕೋವಿಡ್ ಸೋಂಕು ಮತ್ತಷ್ಟು ಹರಡುವ ಆತಂಕವನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಮಾರ್ಚ್ ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸರಿಯಲ್ಲ ಎಂದು ತಜ್ಞರು ಕೂಡ ಅಭಿಪ್ರಾಯಪಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಪೊಬ್ಬತಿ ಹೆರಿಗೆ ಆಸ್ಪತ್ರೆ ಕೋವಿಡ್‌ ಟೆಸ್ಟಿಂಗ್‌ ಅವ್ಯವಹಾರ ಆರೋಪ, ಸಿಬ್ಬಂದಿ ವಿರುದ್ಧ ಅಮಾನತು ಕ್ರಮ

ಕೊರೊನಾ ವೈರಸ್ ಯಾವ ಕಾಲದಲ್ಲಿ ಹೇಗೆ ವರ್ತಿಸುತ್ತದೆ ಎಂಬುದರ ಬಗ್ಗೆ ಇನ್ನೂ ಅಧ್ಯಯನಗಳಾಗುತ್ತಿವೆ. ಚಳಿಗಾಲದಲ್ಲಿ ವೈರಸ್ ಹೇಗೆ ಹರಡುತ್ತದೆ ಎಂಬುದು ಕೂಡ ಇನ್ನೂ ತಿಳಿಯಬೇಕಿದೆ. ಇಂತಹ ಸಂದರ್ಭದಲ್ಲಿ ಚುನಾವಣೆ ನಡೆದರೆ, ಜನರು ಭೌತಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಮೊದಲಾದ ಕ್ರಮಗಳನ್ನು ಅನುಸರಿಸುವುದು ಕಷ್ಟವಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ವಿಧಾನಸಭೆಯ ಎರಡು ಮತ್ತು ವಿಧಾನಪರಿಷತ್‍ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲೇ ಜನರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸುವಲ್ಲಿ ಎಡವುತ್ತಿದ್ದಾರೆ ಎಂಬುದನ್ನು ನೋಡುತ್ತಿದ್ದೇವೆ. ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದರೆ ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳ ಪಾಲನೆ ಬಹಳ ಕಷ್ಟವಾಗುತ್ತದೆ. ಆದ್ದರಿಂದ ಸಾರ್ವಜನಿಕರ ಬದುಕಿನ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವುದು ಒಳಿತು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ