ಆ್ಯಪ್ನಗರ

ಆರೋಗ್ಯ ಸಚಿವರಿಗೆ ಅನಾರೋಗ್ಯ :ಆಸ್ಪತ್ರೆಗೆ ದಾಖಲು

ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

Vijaya Karnataka 19 Nov 2017, 8:25 am

ಕೋಲಾರ: ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ರೀನಿವಾಸಪುರದಲ್ಲಿ ನಡೆದ ಸೌಲತ್ತು ವಿತರಣೆ ಕಾರ್ಯಕ್ರಮಕ್ಕೂ ಮುನ್ನ ಅಸ್ವಸ್ಥರಾಗಿದ್ದ ಅವರಿಗೆ ವಾಂತಿಯಾಗಿತ್ತು. ಬಳಿಕ ಕೊಂಚ ವಿಶ್ರಾಂತಿ ಪಡೆದು ಮುಕ್ಕಾಲು ಗಂಟೆ ಭಾಷಣ ಮಾಡಿದ್ದರು. ಕಾರ್ಯಕ್ರಮ ಮುಗಿಯುತ್ತಿದ್ದಂತೆ ತಮ್ಮ ವಾಹನದಲ್ಲಿ ಬೆಂಗಳೂರಿಗೆ ತೆರಳಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಕಳೆದ 5 ದಿನಗಳಿಂದ ಕೆಪಿಎಂಇ ವಿಧೇಯಕ, ವೈದ್ಯರ ಮುಷ್ಕರದ ಕುರಿತು ಬೆಳಗಾವಿ ಅಧಿವೇಶನಲ್ಲಿ ತಲೆಕೆಡಿಸಿಕೊಂಡಿದ್ದ ಸಚಿವರು ಆಯಾಸಗೊಂಡಿದ್ದರು. ಅಲ್ಲದೆ, ಬೆಳಗ್ಗೆಯಷ್ಟೇ ತವರು ಜಿಲ್ಲೆಗೆ ವಾಪಸಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ